ಕನಕದಾಸರು ತಮ್ಮ ಕೀರ್ತನೆಗಳು ಮತ್ತು ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವ ಉಪದೇಶಗಳನ್ನು ನೀಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕನಕದಾಸರು ಮೂಲತಃ ಬಾಡ ಪ್ರಾಂತ್ಯದ ದಂಡನಾಯಕರಾಗಿದ್ದರು. ಯುದ್ಧವೊಂದರಲ್ಲಿ ಸೋತ ಅವರಿಗೆ ವೈರಾಗ್ಯ ಉಂಟಾಗಿ ಹರಿಭಕ್ತರಾದರು. ಹರಿದಾಸ ಸಾಹಿತ್ಯಕ್ಕೆ ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಉತ್ತಮ ಕಾವ್ಯ ಕೃತಿಗಳನ್ನು ಕನಕದಾಸರು ನೀಡಿದ್ದಾರೆ ಎಂದರು.
ಕನಕದಾಸರು ಸರಳ ಭಾಷೆಯಲ್ಲಿ ಕೀರ್ತನೆಗಳನ್ನು ಮತ್ತು ಕಾವ್ಯಗಳನ್ನು ರಚಿಸುವ ಮೂಲಕ ಕನ್ನಡತನ ಎತ್ತಿ ಹಿಡಿದರು. ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರವಾಗಿದೆ. ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಜನರಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸಿದರು . ‘ಕುಲ ಕುಲವೆಂದು ಹೊಡೆದಾಡದಿರಿ… ಮುಂತಾದ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಜಾತಿ ವ್ಯವಸ್ಥೆಯ ನ್ಯೂನತೆಯನ್ನು ಹೋಗಲಾಡಿಸಬೇಕೆಂದರು.
ಕನಕದಾಸರು ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಸಮಾಜದ ಪರಿವರ್ತನೆ ಕನಕದಾಸರ ಸಾಹಿತ್ಯದ ಪ್ರಮುಖ ಆಶಯವಾಗಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಅಧ್ಯಕ್ಷ ಜಿ.ಸುರೇಶ್ ಮಾತನಾಡಿ, ಸಾಮಾಜಿಕ ಪ್ರಜ್ಞೆಯ ವಿಕಸನಕ್ಕೆ ಬೇಕಾದ ಮಾರ್ಗಗಳು ಕನಕದಾಸರ ಸಾಹಿತ್ಯದಲ್ಲಿ ಇವೆ. ಆದ್ದರಿಂದ ಅವರ ಸಾಹಿತ್ಯ ವೈಚಾರಿಕ ಪ್ರಬುದ್ಧತೆಯಿಂದ ಕೂಡಿದೆ. ಪ್ರತಿಯೊಂದು ಕೃತಿಯಲ್ಲಿಯೂ ಕನಕದಾಸರು ಕವಿತ್ವ-ಕಲ್ಪನೆಗಳ ಜೊತೆಗೆ ವಾಸ್ತವ ನಿಲುವುಗಳನ್ನು ಪ್ರತಿಪಾದಿಸಿದ್ದಾರೆ. ಕನಕದಾಸರು ತಮ್ಮ ವೈಚಾರಿಕ ಮತ್ತು ಪ್ರತಿಭಟನಾ ನೆಲೆಗಟ್ಟಿನಿಂದ ದಾಸಸಾಹಿತ್ಯಕ್ಕೆ, ತನ್ಮೂಲಕ ಕನ್ನಡ ಸಾಹಿತ್ಯಕ್ಕೆ ವೈಚಾರಿಕ ಪ್ರಭೆಯನ್ನು ನೀಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ ದೊಡ್ಡಬಳ್ಳಾಪುರ ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಂಗರಾಜು ಶಿರವಾರ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು, ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ಕನ್ನಡ ಸಾಹಿತ್ಯ ಪರಿಷತ್ತು ಪ್ರತಿನಿಧಿಗಳಾದ ನಾಗರತ್ನಮ್ಮ, ಸಫೀರ್, ಶ್ರೀನಿವಾಸ್ ಮುಂತಾದವರು ಭಾಗ ವಹಿಸಿದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…