ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಜನರಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸಿದರು-ಜಿ.ಎಂ.ನಾಗರಾಜು

ಕನಕದಾಸರು ತಮ್ಮ ಕೀರ್ತನೆಗಳು ಮತ್ತು ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ  ಅಳವಡಿಸಿಕೊಳ್ಳುವ ಉಪದೇಶಗಳನ್ನು ನೀಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನಕದಾಸರು ಮೂಲತಃ ಬಾಡ ಪ್ರಾಂತ್ಯದ  ದಂಡನಾಯಕರಾಗಿದ್ದರು. ಯುದ್ಧವೊಂದರಲ್ಲಿ ಸೋತ ಅವರಿಗೆ ವೈರಾಗ್ಯ ಉಂಟಾಗಿ ಹರಿಭಕ್ತರಾದರು. ಹರಿದಾಸ ಸಾಹಿತ್ಯಕ್ಕೆ ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಉತ್ತಮ‌ ಕಾವ್ಯ ಕೃತಿಗಳನ್ನು  ಕನಕದಾಸರು ನೀಡಿದ್ದಾರೆ ಎಂದರು.

ಕನಕದಾಸರು ಸರಳ ಭಾಷೆಯಲ್ಲಿ ಕೀರ್ತನೆಗಳನ್ನು ಮತ್ತು ಕಾವ್ಯಗಳನ್ನು ರಚಿಸುವ ಮೂಲಕ ಕನ್ನಡತನ ಎತ್ತಿ ಹಿಡಿದರು. ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರವಾಗಿದೆ. ಕನಕದಾಸರು ತಮ್ಮ ಕೀರ್ತನೆಗಳ  ಮೂಲಕ ಜನರಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸಿದರು .  ‘ಕುಲ ಕುಲವೆಂದು ಹೊಡೆದಾಡದಿರಿ… ಮುಂತಾದ  ಕೀರ್ತನೆಗಳ ಮೂಲಕ ಸಮಾಜದಲ್ಲಿನ ಜಾತಿ ವ್ಯವಸ್ಥೆಯ ನ್ಯೂನತೆಯನ್ನು ಹೋಗಲಾಡಿಸಬೇಕೆಂದರು.

ಕನಕದಾಸರು ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಸಮಾಜದ ಪರಿವರ್ತನೆ ಕನಕದಾಸರ ಸಾಹಿತ್ಯದ ಪ್ರಮುಖ ಆಶಯವಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಅಧ್ಯಕ್ಷ ಜಿ.ಸುರೇಶ್ ಮಾತನಾಡಿ, ಸಾಮಾಜಿಕ ಪ್ರಜ್ಞೆಯ ವಿಕಸನಕ್ಕೆ ಬೇಕಾದ ಮಾರ್ಗಗಳು ಕನಕದಾಸರ   ಸಾಹಿತ್ಯದಲ್ಲಿ ಇವೆ. ಆದ್ದರಿಂದ ಅವರ ಸಾಹಿತ್ಯ ವೈಚಾರಿಕ ಪ್ರಬುದ್ಧತೆಯಿಂದ ಕೂಡಿದೆ. ಪ್ರತಿಯೊಂದು ಕೃತಿಯಲ್ಲಿಯೂ  ಕನಕದಾಸರು ಕವಿತ್ವ-ಕಲ್ಪನೆಗಳ ಜೊತೆಗೆ ವಾಸ್ತವ ನಿಲುವುಗಳನ್ನು   ಪ್ರತಿಪಾದಿಸಿದ್ದಾರೆ. ಕನಕದಾಸರು ತಮ್ಮ ವೈಚಾರಿಕ ಮತ್ತು ಪ್ರತಿಭಟನಾ ನೆಲೆಗಟ್ಟಿನಿಂದ ದಾಸಸಾಹಿತ್ಯಕ್ಕೆ, ತನ್ಮೂಲಕ ಕನ್ನಡ ಸಾಹಿತ್ಯಕ್ಕೆ ವೈಚಾರಿಕ ಪ್ರಭೆಯನ್ನು ನೀಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ ದೊಡ್ಡಬಳ್ಳಾಪುರ ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಂಗರಾಜು ಶಿರವಾರ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು, ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ಕನ್ನಡ ಸಾಹಿತ್ಯ ಪರಿಷತ್ತು ಪ್ರತಿನಿಧಿಗಳಾದ ನಾಗರತ್ನಮ್ಮ, ಸಫೀರ್, ಶ್ರೀನಿವಾಸ್ ಮುಂತಾದವರು ಭಾಗ ವಹಿಸಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

4 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

16 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

17 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

18 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

18 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago