ಕನಕಪುರವನ್ನ ಬೆಂಗಳೂರಿಗೆ ಸೇರಿಸುವ ವಿಚಾರ: ‘ಡಿಕೆಶಿ ಹೇಳಿಕೆ ಸರಿಯಲ್ಲ:  ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯ ಹೆಚ್ಚಿಸಿಕೊಳ್ಳುವ ದುರುದ್ದೇಶದಿಂದ ಡಿಕೆಶಿಯಿಂದ ಹೊಸ ನಾಟಕ’- ಮಾಜಿ ಸಿಎಂ ಹೆಚ್ ಡಿಕೆ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯಿಂದ ಕನಕಪುರ ತಾಲೂಕನ್ನು ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ನೀಡಿರುವ ಹೇಳಿಕೆ ಸರಿಯಲ್ಲ. ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯವನ್ನು ಹೆಚ್ಚಿಸಿಕೊಂಡು ತಮ್ಮ ಖಜಾನೆ ವೃದ್ಧಿ ಮಾಡಿಕೊಳ್ಳುವ ಏಕೈಕ ದುರುದ್ದೇಶದಿಂದ ಅವರು ಕನಕಪುರ ಜನರ ನೆಪ ಹೇಳಿಕೊಂಡು ಈ ಹೊಸ ನಾಟಕ ಶುರು ಮಾಡಿದ್ದಾರೆ ಎಂದು ಡಿಕೆಶಿ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಕುಮಾರಸ್ವಾಮಿ.

ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿಟ್ಟುಕೊಳ್ಳಿ ಎನ್ನುವ ಅವರ ಮಾತು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ. ಅಷ್ಟೇ ಅಲ್ಲ; ಕನಕಪುರ ಜನರಿಗೆ ಮಂಕುಬೂದಿ ಎರಚುವ ಹುನ್ನಾರ ಎಂದಿದ್ದಾರೆ.

ನಿಮ್ಮ ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು ಆಗುವುದಿಲ್ಲ, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ ಎನ್ನುವ ಇವರು; ಇಷ್ಟು ದಿನ ಶಾಸಕರಾಗಿ, ಸಚಿವರಾಗಿ ಉಪ ಮುಖ್ಯಮಂತ್ರಿ ಆಗಿ ಮಾಡಿದ್ದೇನು? ತಮ್ಮ ಜೇಬು ತುಂಬಿಸಿಕೊಂಡಿದ್ದು, ತಮ್ಮ ಮನೆಯನ್ನು ಉದ್ಧಾರ ಮಾಡಿಕೊಂಡಿದ್ದಷ್ಟೇ. ಇಷ್ಟಕ್ಕೂ ಕನಕಪುರ ಸುತ್ತಮುತ್ತ ಯಾರ ಆಸ್ತಿಗಳಿವೆ? ಅದರಲ್ಲಿ  ಬೇನಾಮಿಗಳು ಎಷ್ಟು? ಎಲ್ಲೆಲ್ಲಿ ಅಕ್ರಮವಾಗಿ ಬೇಲಿ ಹಾಕಲಾಗಿದೆ?  ಅವೆಲ್ಲಾ ಅಕ್ರಮಗಳನ್ನು ಸಕ್ರಮ ಮಾಡಿಕೊಳ್ಳಲು ಬೆಂಗಳೂರು ಸೇರ್ಪಡೆಯ ನಾಟಕ! ಈಗಾಗಲೇ ಕನಕಪುರಕ್ಕೆ ಒಂದು ಮೆಡಿಕಲ್ ಕೊಟ್ಟಿದ್ದರೂ ರಾಮನಗರ ಮೆಡಿಕಲ್ ಕಾಲೇಜನ್ನು ಕದ್ದು ಒಯ್ಯವುದರ ಹಿಂದೆಯೂ ಇದೇ ದುಷ್ಟ ತಂತ್ರ ಅಡಗಿತ್ತು ಎಂದು ಹೇಳಿದ್ದಾರೆ.

ಕನಕಪುರಕ್ಕೆ 52 ಕೀ.ಮೀ. ದೂರದಲ್ಲಿದೆ ಬೆಂಗಳೂರು. 25 ಕೀ.ಮೀ. ದೂರದಲ್ಲಿದೆ ರಾಮನಗರ. ಜನರಿಗೆ ಯಾವುದು ಅನುಕೂಲ? ದಿನ ಬೆಳಗಾದರೆ ಕನಕಪುರದವರು ಬೆಂಗಳೂರಿಗೆ ಅಲೆಯಬೇಕೆ? ಉಪ ಮುಖ್ಯಮಂತ್ರಿಗಳ ಒಳ ಉದ್ದೇಶದ ಬಗ್ಗೆ ಅನೇಕ ಅನುಮಾನಗಳು ಸಹಜವಾಗಿಯೇ ಮೂಡುತ್ತವೆ ಎಂದು ತಿಳಿಸಿದ್ದಾರೆ.

2006-2007ರಲ್ಲಿ ಕನಕಪುರ ಹೇಗಿತ್ತು? ಡಿಕೆಶಿ ಅವರು ನೆನಪು ಮಾಡಿಕೊಳ್ಳಬೇಕು. ಆಗಲೇ ಪಟ್ಟಣದ ಡಬಲ್ ರಸ್ತೆ ನಿರ್ಮಾಣ, ಕನಕಪುರ ಹೆಬ್ಬಾಗಿಲಿನಲ್ಲಿರುವ ಸೇತುವೆ ನಿರ್ಮಾಣಕ್ಕೆ ಯೋಜನೆ ಕೊಟ್ಟವನು ನಾನು. ಸಂಗಮದಲ್ಲಿ ಪ್ರವಾಹ ಬಂದಾಗಲೆಲ್ಲಾ ಅನೇಕರು ಹಗ್ಗ ಕಟ್ಟಿಕೊಂಡು ರಸ್ತೆ ದಾಟಲು ಹೋಗಿ ಸಾವನ್ನಪ್ಪುತ್ತಿದ್ದರು. ಇದನ್ನು ತಪ್ಪಿಸಲು ಅಲ್ಲಿ ಸೇತುವೆ ನಿರ್ಮಿಸಿ ಮಹದೇಶ್ವರ ಬೆಟ್ಟಕ್ಕೆ ಸುಲಭ ಸಂಪರ್ಕ ಕಲ್ಪಿಸುವ ಯೋಜನೆಗೆ ಇದೇ ಡಿ.ಕೆ.ಶಿವಕುಮಾರ್ ಅವರು 2006ರಲ್ಲಿಯೇ ವಿರೋಧ ಮಾಡಿದ್ದರು! ಈಗ ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸುವ ಮಾತು!! ನದಿಯಲ್ಲಿ ಜನರು ಕೊಚ್ಚಿಕೊಂಡು ಹೋಗಿ ಸತ್ತರೂ ಪರವಾಗಿಲ್ಲ. ಆದರೆ, ಇವರ ರಿಯಲ್ ಎಸ್ಟೇಟ್ ವ್ಯವಹಾರ ಪೊಗದಸ್ತಾಗಿ ಸಾಗಬೇಕು. ಸದ್ಯ ಬೆಂಗಳೂರಿನಿಂದ ಕನಕಪುರಕ್ಕೆ ಸುರಂಗ ಕೊರೆಸುವೆ ಎಂದು ಹೇಳಲಿಲ್ಲ.. ಅದೇ ನಮ್ಮ ಪುಣ್ಯ ಎಂದಿದ್ದಾರೆ.

ಕನಕಪುರ ಮೆಡಿಕಲ್ ಕಾಲೇಜು ಚಿಕ್ಕಬಳ್ಳಾಪುರ ಪಾಲಾದ ಮೇಲೆ ಮೈತ್ರಿ ಸರಕಾರದ ಅವಧಿಯಲ್ಲಿ ಕನಕಪುರಕ್ಕೆ ಮತ್ತೊಂದು ಮೆಡಿಕಲ್ ಕಾಲೇಜ್ ಮಂಜೂರು ಮಾಡಿದ್ದೆ. ಆದರೆ, ಇದೇ ಮಹಾನುಭಾವರೇ ಮೈತ್ರಿ ಸರಕಾರವನ್ನು ತೆಗೆದ ಪರಿಣಾಮ ಆ ಯೋಜನೆ ನೆನೆಗುದಿಗೆ ಬಿತ್ತು. ಯೋಜನೆಯೂ, ಅದರ 350 ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನವೂ ಅಲ್ಲಿಯೇ ಉಳಿಯಿತು. ಉಪ ಮುಖ್ಯಮಂತ್ರಿ ಆದವರು ಆ ಯೋಜನೆಯನ್ನು ಪೂರ್ಣಗೊಳಿಸಬೇಕೆ? ಅಥವಾ ರಾಮನಗರ ಮೆಡಿಕಲ್ ಕಾಲೇಜ್ ಅನ್ನು ಹೈಜಾಕ್ ಮಾಡಲು ಹುನ್ನಾರ ನಡೆಸಬೇಕೇ? ಎಂದು ಪ್ರಶ್ನೆ ಮಾಡಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳ ಜನರ ಬಹುಕಾಲದ ಕನಸು. ಆ ಕನಸನ್ನು ನಾನು  ನನಸು ಮಾಡಿದ್ದೇನೆ. ಈಗ ತಮ್ಮ ಸ್ವಾರ್ಥಕ್ಕಾಗಿ ರಾಮನಗರ ಜಿಲ್ಲೆ ಜನರ ಬೆನ್ನಿಗೆ ಚೂರಿ ಹಾಕಿ ಕನಕಪುರದ ಜನರ ಹಿತಕ್ಕೆ ಕೊಡಲಿಪೆಟ್ಟು ಹಾಕುವ ಹುನ್ನಾರ ನಡೆದಿದೆ. ಇದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕನಕಪುರ ಸೇರಿ 4 ವಿಧಾನಸಭೆ ಕ್ಷೇತ್ರಗಳ ಜನರೂ ಒಟ್ಟಾಗಿ ಒಂದೇ ಜಿಲ್ಲೆಯಲ್ಲಿ ಉಳಿಯಲಿದ್ದಾರೆ. ಡಿ.ಕೆ.ಶಿವಕುಮಾರ್ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

10 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

12 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago