ಕನಕಪುರ ಶ್ರೀನಿವಾಸ್ ವಿವಾದಾತ್ಮಕ ಮಾತಿಗೆ ರೋರಿಂಗ್ ಸ್ಟಾರ್ ಶ್ರೀಮುರುಳಿ ಖಡಕ್ ರಿಯಾಕ್ಷನ್: ಕನಕಪುರ ಶ್ರೀನಿವಾಸ್ ಮಾತಾಡಿದ್ದು ತುಂಬಾ ತಪ್ಪು, ಮನಸ್ಸಿಗೆ ಬಹಳ ಬೇಜಾರ್ ಆಗ್ತಿದೆ…ನಾವು ಕ್ಷಮಿಸೋದೇ ಇಲ್ಲ ಎಂದ ಶ್ರೀಮುರುಳಿ

ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅನೇಕರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಡಿಸಿಎಂ ಡಿ.ಕೆ ಶಿವಕುಮಾರ್, ಧ್ರುವ ಸರ್ಜಾ, ಎ.ಪಿ. ಅರ್ಜುನ್, ಜೋಗಿ ಪ್ರೇಮ್, ಪುನೀತ್ ರಾಜ್​ಕುಮಾರ್ ಸೇರಿದಂತೆ ಹಲವರ ವಿರುದ್ಧ ಅವರು ಅಶ್ಲೀಲವಾಗಿ ಮಾತನಾಡಿದ್ದರು. ಅದಕ್ಕೆ ಚಿತ್ರರಂಗದಲ್ಲಿ ಖಂಡನೆ ವ್ಯಕ್ತವಾಗಿದೆ.

ಈ ಕುರಿತು ದೊಡ್ಡಬಳ್ಳಾಪುರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರುಳಿ ಮಾಧ್ಯಮದವರಿಗೆ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು… ನಮಗೆಲ್ಲಾ ದೊಡ್ಡವರು ಡಾ.ರಾಜ್ ಕುಮಾರ್ ಅವರು ಒಂದು ಮಾತು ಹೇಳಿದ್ದರು, ಏನೆಂದರೆ ನಿರ್ಮಾಪಕರು ಅನ್ನದಾತರು ಅಂತಾ. ಅವರ ಮಾತನ್ನು ಚಾಚೂ ತಪ್ಪದೇ ನಿರ್ಮಾಪಕರನ್ನು ಗೌರವದಿಂದ ಕಾಣುತ್ತೇವೆ. ಕಲಾವಿದರ ಹತ್ತಿರ ಕೆಲಸ ಮಾಡಿಸಿಕೊಳ್ಳುವಾಗ ಒಂದು ರೀತಿ, ಕೆಲಸ ಮುಗಿದ ನಂತರ ಒಂದು ರೀತಿ, ಯಾವುದೋ ಒಂದು ಘಟನೆ ಇಟ್ಟುಕೊಂಡು ಬೇಜವಾಬ್ದಾರಿ ತನದಿಂದ ಮಾತನಾಡಿರುವುದು ನನಗೆ ಇಷ್ಟವಾಗಿಲ್ಲ. ಕಲಾವಿದರು ಎಂದ ಮೇಲೆ ಕಲಾವಿದರೆ. ಕಲಾವಿದರಿಗೆ ಮನೆ, ಸಂಸಾರ, ಜವಾಬ್ದಾರಿ ಎಲ್ಲಾ ಇರುತ್ತೆ. ಇಲ್ಲದೇ ಇರುವವರ ಬಗ್ಗೆ ಮಾತಾಡೋದು, ಇನ್ಯಾರದೋ ಬಗ್ಗೆ ಮಾತಾಡೋದು ಇದೆನ್ನೆಲ್ಲಾ ಏನಕ್ಕೆ ಮಾಡಬೇಕು. ನಾವೆಲ್ಲಾ ಕೆಲಸ ಮಾಡ್ತಿರೋದು ತಾಯಿ ಭುವನೇಶ್ವರಿಗೋಸ್ಕರ. ಕಷ್ಟ ಯಾರಿಗೆ ಬರಲ್ಲ, ನಮಗೂ ಕಷ್ಟ ಇದೆ, ಇಗಲೂ ಕಷ್ಟ ಇದೆ. ಆ ಕಷ್ಟಾನ ಪರಿಹಾರ ಮಾಡಿಕೊಂಡು ಹೋಗ್ತಾನೆ ಇದಿವಿ. ಕಷ್ಟ ಇದೆ ಅಂತಾ ಹೇಳಿ ಬೀದಿಗಿಳಿದು ಬೇರೆಯವರನ್ನ ಅವಮಾನ ಮಾಡುತ್ತಿದ್ದೀವಾ ಎಂದು ಹೇಳಿದರು.

ನಿರ್ಮಾಪಕರು ಹಿರಿಯರು, ಹಿರಿಯರ ಸ್ಥಾನದಲ್ಲಿದ್ದಾರೆ.. ಸ್ಪಲ್ಪ ಯೋಚನೆ ಮಾಡಿ ಮಾತಾಡಬೇಕು. ಬಹಳ ಸೂಕ್ಷ್ಮ ವಿಚಾರಗಳು, ವ್ಯಕ್ತಿಗಳ ಬಗ್ಗೆ ಮಾತನಾಡಿದ್ದಾರೆ.. ಇದು ಬಹಳ ತಪ್ಪಾಗಿ ಕಾಣುತ್ತಿದೆ. ಅದೇರೀತಿ ತಪ್ಪಾಗಿ ಕೇಳುತ್ತಿದೆ.. ಇದು ಇಲ್ಲಿಗೆ ನಿಲ್ಲಬೇಕು. ಚಿತ್ರರಂಗದ ಹಿರಿಯರು ಮುಂದೆ ಬಂದು ಕೂಡಲೇ ಇದನ್ನ ಇಲ್ಲಿಗೆ ನಿಲ್ಲಿಸಬೇಕು..ಇದು ಕೂಡು ಕುಟುಂಬ ಅವಿಭಕ್ತ ಕುಟುಂಬ ಇದ್ದ ಹಾಗೇ, ಈ ಕೂಡು ಕುಟುಂಬ ಹೊಡೀಬಾರದು, ನಾವೆಲ್ಲಾ ಒಗ್ಗಟ್ಟಿನಿಂದ ಇರಬೇಕು ಎಂದರು…

ಯಾವ ನಟರೂ ಅಷ್ಟೋಂದು ಕೆಟ್ಟವರಲ್ಲ. ನಟರ ಬಗ್ಗೆ ಏಕೆ ಹಾಗೆ ಮಾತಾಡಬೇಕಿತ್ತು, ಏನಕ್ಕೆ ಆ ರೀತಿ ಮಾತಾಡಬೇಕಿತ್ತು. ಇದು ಕೇಳಕ್ಕೆ ಏಕೋ ಚೆನ್ನಾಗಿಲ್ಲ. ನೋಡಕ್ಕೂ ಚೆನ್ನಾಗಿಲ್ಲ ಅದಕ್ಕೆ ಕೇಳಿಲ್ಲ, ನೋಡಿಲ್ಲ. ಕೆಲವೊಂದು ಸೂಕ್ಷ್ಮ ವಿಚಾರಗಳು, ಸೂಕ್ಷ್ಮ ವ್ಯಕ್ತಿಗಳ ಬಗ್ಗೆ ಗಂಭೀರವಾಗಿ, ಆಲೋಚನೆ ಮಾಡಿ ಮಾತಾಡು ವಿಷಯಗಳನ್ನ ಬಹಳ ದುರುಪಯೋಗಪಡಿಸಿಕೊಂಡು ಮಾತನಾಡಿರುವುದು ಖಂಡನೀಯ ಎಂದು ತಿಳಿಸಿದರು.

ಅಪ್ಪು ಅವರ ಬಗ್ಗೆ ಮಾತನಾಡಿರುವುದಕ್ಕೆ ಕ್ಷಮಾಪಣೆನೇ ಇಲ್ಲ.‌ ಈ ವಿಚಾರದಲ್ಲಿ ನಾವು ಕ್ಷಮಿಸೋದೇ ಇಲ್ಲ. ನಾವು ಯಾರಿಗೆ ಏನ್ ಮಾಡಿದ್ದೀವಿ…. ಇಷ್ಟೋಂದು ದಿನಗಳಿಂದ ಇಂಡಸ್ಟ್ರಿಗೋಸ್ಕರ, ಸಿನಿಮಾಗೋಸ್ಕರ, ಕಲೆಯನ್ನು ಉಳಿಸಲು ಕೆಲಸ ಮಾಡಿಕೊಂಡು ಬಂದಿದ್ದೇವೆ. ಸಿನಿಮಾಯಿಂದನೇ ಬದುಕುತಿದ್ದೇವೆ. ಕಷ್ಟನೋ ಸುಖಾನೋ ಇಲ್ಲೇ ಮುಳುಗುತ್ತಿದ್ದೇವೆ, ಇಲ್ಲೇ ಎದ್ದೇಳುತ್ತಿದ್ದೇವೆ ಎಂದರು..

ಸಿನಿಮಾ ಇಂಡಸ್ಟ್ರಿ ಎಂಬ ಮನೆಯಲ್ಲಿ ಹಿರಿಯರು ಕೆಲವರು ಇಲ್ಲ. ಅವರ ಬದಲಿಗೆ ಕೆಲವರು ಮನೆಯ ಜವಾಬ್ದಾರಿ ತಗೋಂಡಿದ್ದಾರೆ.‌ ಇದೆನ್ನೆಲ್ಲಾ ಅವರು ಗಮನಹರಿಸುತ್ತಿದ್ದಾರೆ.. ಇದಕ್ಕೆ ಕ್ರಮ ತಗೋತಾರೆ ಎಂದು ಹೇಳಿದರು…

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

3 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago