ಏ.12, 13ರಂದು ಕನಸವಾಡಿಯಲ್ಲಿ ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿಯಲ್ಲಿ ಬರುವ ಏಪ್ರಿಲ್ 12 ಮತ್ತು 13ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ತೀರ್ಮಾನ ಕೈಗೊಂಡಿದ್ದು, ಕನ್ನಡದ ಕಾಯಕಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳು ಮುಗಿದ ಬಳಿಕ ಸಮ್ಮೇಳನವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಈ ಹಂತದಲ್ಲಿ ನಿಯಮಾವಳಿಯಂತೆ ಅಗತ್ಯ ಸಹಕಾರ ನೀಡಲಾಗುವುದು. ಇಲಾಖಾ ಯೋಜನೆಗಳ ಕುರಿತ ವಸ್ತು ಪ್ರದರ್ಶನಕ್ಕೂ ಅವಕಾಶ ಕಲ್ಪಿಸಲಾಗುವುದು. ಜಿಲ್ಲಾ ಮಟ್ಟದ ಕಾರ್ಯಕ್ರಮವಾಗಿರುವ ಹಿನ್ನಲೆ ಎಲ್ಲ ತಾಲೂಕುಗಳಿಗೂ ಅಗತ್ಯ ಅವಕಾಶಗಳನ್ನು ನೀಡಬೇಕಿದೆ. ದೊಡ್ಡಬಳ್ಳಾಪುರ ತಹಶೀಲ್ದಾರ್‌ ಅವರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಪೂರ್ವ ಸಿದ್ದತೆಗಳನ್ನು ಪರಿವೀಕ್ಷಿಸಲು ಮಾರ್ಗದರ್ಶನ ಮಾಡುವುದಾಗಿ ತಿಳಿಸಿದರು.

ಕಸಾಪ ಜಿಲ್ಲಾಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಮಾತನಾಡಿ, ಸಮ್ಮೇಳನದ ರೂಪರೇಶೆ ಮತ್ತು ನಿರೀಕ್ಷಿತ ವೆಚ್ಚಗಳ ಕುರಿತು ಪ್ರಸ್ತಾಪಿಸಿದರು. 2 ದಿನಗಳ ಸಮ್ಮೇಳನದಲ್ಲಿ ಜಿಲ್ಲೆಯ ಸಾಹಿತ್ಯ, ಸಂಸ್ಕೃತಿ, ಚಳವಳಿ, ಸಮಕಾಲೀನ ಸವಾಲುಗಳು ಸೇರಿದಂತೆ ವಿವಿಧ ವಿಚಾರಗಳ ಗೋಷ್ಠಿಗಳು, ಕವಿಗೋಷ್ಠಿ, ಸನ್ಮಾನ, ಸಮ್ಮೇಳನಾಧ್ಯಕ್ಷರ ಮೆರವಣಿಗೆ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿವೆ. ಸಾಹಿತ್ಯಿಕ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ಕೆ.ಆರ್ ಮಾತನಾಡಿ, ಪರಿಷತ್ತಿನ ನಿಯಮಾವಳಿಯಂತೆ ಸಮ್ಮೇಳನಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜಿಲ್ಲಾ ಸಮ್ಮೇಳನ ಆಯೋಜಿಸಲು ಈ ಬಾರಿ ದೊಡ್ಡಬಳ್ಳಾಪುರ ತಾಲೂಕಿಗೆ ಅವಕಾಶ ನೀಡಲಾಗಿದ್ದು, ಸಮ್ಮೇಳನದ ಪೂರ್ವಭಾವಿಯಾಗಿ ದೊಡ್ಡಬಳ್ಳಾಪುರದಲ್ಲಿ ಕನ್ನಡಪರ ಸಂಘಟನೆಗಳು ಸೇರಿದಂತೆ ಎಲ್ಲ ಸಂಘ-ಸಂಸ್ಥೆಗಳ ಸಭೆ ನಡೆಸಲು ತಾಲೂಕು ಘಟಕಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ಜಿಲ್ಲಾ ಕಸಾಪ ಕಾರ್ಯದರ್ಶಿ ಅಶ್ವತ್ಥಗೌಡ, ದೊಡ್ಡಬಳ್ಳಾಪುರ ತಾಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ನೆಲಮಂಗಲ ತಾಲೂಕು ಅಧ್ಯಕ್ಷ ಪ್ರಕಾಶ್‌ ಮೂರ್ತಿ, ಹೊಸಕೋಟೆ ತಾಲೂಕು ಅಧ್ಯಕ್ಷ ಮುನಿರಾಜು, ದೇವನಹಳ್ಳಿ ತಾಲೂಕು ಅಧ್ಯಕ್ಷ ನಂಜೇಗೌಡ, ಕನ್ನಡ ಪಕ್ಷದ ರಾಜ್ಯ ಮುಖಂಡ ಸಂಜೀವನಾಯಕ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕುಗಳ ಕಸಾಪ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಕನಸವಾಡಿಯ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

7 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

8 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

18 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

18 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

21 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

1 day ago