ಏ.12, 13ರಂದು ಕನಸವಾಡಿಯಲ್ಲಿ ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿಯಲ್ಲಿ ಬರುವ ಏಪ್ರಿಲ್ 12 ಮತ್ತು 13ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ತೀರ್ಮಾನ ಕೈಗೊಂಡಿದ್ದು, ಕನ್ನಡದ ಕಾಯಕಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳು ಮುಗಿದ ಬಳಿಕ ಸಮ್ಮೇಳನವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಈ ಹಂತದಲ್ಲಿ ನಿಯಮಾವಳಿಯಂತೆ ಅಗತ್ಯ ಸಹಕಾರ ನೀಡಲಾಗುವುದು. ಇಲಾಖಾ ಯೋಜನೆಗಳ ಕುರಿತ ವಸ್ತು ಪ್ರದರ್ಶನಕ್ಕೂ ಅವಕಾಶ ಕಲ್ಪಿಸಲಾಗುವುದು. ಜಿಲ್ಲಾ ಮಟ್ಟದ ಕಾರ್ಯಕ್ರಮವಾಗಿರುವ ಹಿನ್ನಲೆ ಎಲ್ಲ ತಾಲೂಕುಗಳಿಗೂ ಅಗತ್ಯ ಅವಕಾಶಗಳನ್ನು ನೀಡಬೇಕಿದೆ. ದೊಡ್ಡಬಳ್ಳಾಪುರ ತಹಶೀಲ್ದಾರ್‌ ಅವರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಪೂರ್ವ ಸಿದ್ದತೆಗಳನ್ನು ಪರಿವೀಕ್ಷಿಸಲು ಮಾರ್ಗದರ್ಶನ ಮಾಡುವುದಾಗಿ ತಿಳಿಸಿದರು.

ಕಸಾಪ ಜಿಲ್ಲಾಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಮಾತನಾಡಿ, ಸಮ್ಮೇಳನದ ರೂಪರೇಶೆ ಮತ್ತು ನಿರೀಕ್ಷಿತ ವೆಚ್ಚಗಳ ಕುರಿತು ಪ್ರಸ್ತಾಪಿಸಿದರು. 2 ದಿನಗಳ ಸಮ್ಮೇಳನದಲ್ಲಿ ಜಿಲ್ಲೆಯ ಸಾಹಿತ್ಯ, ಸಂಸ್ಕೃತಿ, ಚಳವಳಿ, ಸಮಕಾಲೀನ ಸವಾಲುಗಳು ಸೇರಿದಂತೆ ವಿವಿಧ ವಿಚಾರಗಳ ಗೋಷ್ಠಿಗಳು, ಕವಿಗೋಷ್ಠಿ, ಸನ್ಮಾನ, ಸಮ್ಮೇಳನಾಧ್ಯಕ್ಷರ ಮೆರವಣಿಗೆ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿವೆ. ಸಾಹಿತ್ಯಿಕ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ಕೆ.ಆರ್ ಮಾತನಾಡಿ, ಪರಿಷತ್ತಿನ ನಿಯಮಾವಳಿಯಂತೆ ಸಮ್ಮೇಳನಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜಿಲ್ಲಾ ಸಮ್ಮೇಳನ ಆಯೋಜಿಸಲು ಈ ಬಾರಿ ದೊಡ್ಡಬಳ್ಳಾಪುರ ತಾಲೂಕಿಗೆ ಅವಕಾಶ ನೀಡಲಾಗಿದ್ದು, ಸಮ್ಮೇಳನದ ಪೂರ್ವಭಾವಿಯಾಗಿ ದೊಡ್ಡಬಳ್ಳಾಪುರದಲ್ಲಿ ಕನ್ನಡಪರ ಸಂಘಟನೆಗಳು ಸೇರಿದಂತೆ ಎಲ್ಲ ಸಂಘ-ಸಂಸ್ಥೆಗಳ ಸಭೆ ನಡೆಸಲು ತಾಲೂಕು ಘಟಕಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ಜಿಲ್ಲಾ ಕಸಾಪ ಕಾರ್ಯದರ್ಶಿ ಅಶ್ವತ್ಥಗೌಡ, ದೊಡ್ಡಬಳ್ಳಾಪುರ ತಾಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ನೆಲಮಂಗಲ ತಾಲೂಕು ಅಧ್ಯಕ್ಷ ಪ್ರಕಾಶ್‌ ಮೂರ್ತಿ, ಹೊಸಕೋಟೆ ತಾಲೂಕು ಅಧ್ಯಕ್ಷ ಮುನಿರಾಜು, ದೇವನಹಳ್ಳಿ ತಾಲೂಕು ಅಧ್ಯಕ್ಷ ನಂಜೇಗೌಡ, ಕನ್ನಡ ಪಕ್ಷದ ರಾಜ್ಯ ಮುಖಂಡ ಸಂಜೀವನಾಯಕ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕುಗಳ ಕಸಾಪ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಕನಸವಾಡಿಯ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

53 minutes ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

3 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

7 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago