ಕನಸವಾಡಿಯಲ್ಲಿ 101 ಗಣಪತಿ ಪ್ರತಿಷ್ಠಾಪನೆ

ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ‌ ಚಿಕ್ಕಮಧುರೆ ವತಿಯಿಂದ ತಾಲೂಕಿನ ಕನಸವಾಡಿಯ ಶ್ರೀ ಶನಿಮಹಾತ್ಮ ದೇವಾಲಯದ ಬಳಿ 101 ಗಣಪತಿ ಪ್ರತಿಷ್ಠಾಪನೆ ಮಾಡಲಾಗಿತ್ತು.

ಎಲ್ಲರಿಗೂ ಒಳ್ಳೆಯದನ್ನು ಬಯಸಿ, ಉತ್ತಮ ಮಳೆ ಬೆಳೆ ಆಗಲೆಂದು, ಊರಿಗೆ ಯಾವುದೇ ವಿಘ್ನಗಳು ಎದರುಗಾಬಾರದು ಎಂದು 101 ಗಣಪತಿ ಮೂರ್ತಿಗಳನ್ನು ಒಂದೆಡೆ ಪ್ರತಿಷ್ಠಾಪಿಸಲಾಗಿದೆ.

ಮೊದಲನೇ ವರ್ಷದ ಗಣಪತಿ ಉತ್ಸವವನ್ನು ಸೆ.16ರಿಂದ ಅ.3ರವರೆಗೆ ಆಯೋಜಿಸಲಾಗಿದ್ದು, ಪ್ರತಿನಿತ್ಯ ವಾದ್ಯಗೋಷ್ಠಿ, ಮಕ್ಕಳ ನೃತ್ಯ, ಭಕ್ತಿ ಗೀತೆಗಳು ಸೇರಿದಂತೆ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಇದರ ಜೊತೆಗೆ ಲಾಟರಿ ಯೋಜನೆ ಮತ್ತು ಬಹುಮಾನಗಳನ್ನು ಇರಿಸಲಾಗಿತ್ತು. ಅ.3ರಂದು ಎಲ್ಲಾ ಗ್ರಾಮಸ್ಥರು, ಭಕ್ತಾಧಿಗಳ ಸಮ್ಮುಖದಲ್ಲಿ ಲಾಟರಿ ಡ್ರಾ ನಡೆಸಿ,‌ ಡ್ರಾ ಆದ ನಂತರ ಸ್ಥಳದಲ್ಲೇ ಬಹುಮಾನ ವಿತರಣೆ ಮಾಡಲಾಗುವುದು. ನಂತರ ಶ್ರೀ ವಿನಾಯಕನ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಡಿ.ಜೆ ನೃತ್ಯ, ತಮಟೆ, ತಾಳ, ವಾಧ್ಯ, ಮೇಳ, ಜಾನಪದ ಕಲಾ ತಂಡಗಳ ನೃತ್ಯ ನಡೆಸಿ ಅಮಾನಿಕೆರೆಯಲ್ಲಿ ವಿನಾಯಕ ವಿಸರ್ಜನೆ ಮಾಡಲಾಗುವುದು ಎಂದು ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ‌ ಮುಖಂಡರು ತಿಳಿಸಿದ್ದಾರೆ.

ಈ ವೇಳೆ ರೈಲ್ವೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್ ಮಲ್ಲಯ್ಯ, ಕನಸವಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಟಿ.ವಿಜಯ ಕುಮಾರ್, ಗಣೇಶ ಸೇವಾ ಸಮಿತಿ ಅಧ್ಯಕ್ಷ ರೇಣುಕಾ ಪ್ರಸಾದ್, ವಿ.ಎಸ್.ಎಸ್.ಎನ್ ಮಾಜಿ ನಿರ್ದೇಶಕ ವಿಶ್ವನಾಥ್, ಕನಸವಾಡಿ ಗ್ರಾ ಪಂ ಮಾಜಿ ಸದಸ್ಯ ವಿರೂಪಾಕ್ಷಯ್ಯ, ಬಿಜೆಪಿ ಯುವ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ‌ ಕೆ.ಸತೀಶ್‌ ಕುಮಾರ್, ಮುಖಂಡರಾದ ನಾರಾಯಣ ನಾಯ್ಕ್, ಶಿವು ಸೇರಿದಂತೆ‌ ಇತರರು‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

15 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

16 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

17 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

17 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago