ಕನಸವಾಡಿಯಲ್ಲಿ 101 ಗಣಪತಿ ಪ್ರತಿಷ್ಠಾಪನೆ

ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ‌ ಚಿಕ್ಕಮಧುರೆ ವತಿಯಿಂದ ತಾಲೂಕಿನ ಕನಸವಾಡಿಯ ಶ್ರೀ ಶನಿಮಹಾತ್ಮ ದೇವಾಲಯದ ಬಳಿ 101 ಗಣಪತಿ ಪ್ರತಿಷ್ಠಾಪನೆ ಮಾಡಲಾಗಿತ್ತು.

ಎಲ್ಲರಿಗೂ ಒಳ್ಳೆಯದನ್ನು ಬಯಸಿ, ಉತ್ತಮ ಮಳೆ ಬೆಳೆ ಆಗಲೆಂದು, ಊರಿಗೆ ಯಾವುದೇ ವಿಘ್ನಗಳು ಎದರುಗಾಬಾರದು ಎಂದು 101 ಗಣಪತಿ ಮೂರ್ತಿಗಳನ್ನು ಒಂದೆಡೆ ಪ್ರತಿಷ್ಠಾಪಿಸಲಾಗಿದೆ.

ಮೊದಲನೇ ವರ್ಷದ ಗಣಪತಿ ಉತ್ಸವವನ್ನು ಸೆ.16ರಿಂದ ಅ.3ರವರೆಗೆ ಆಯೋಜಿಸಲಾಗಿದ್ದು, ಪ್ರತಿನಿತ್ಯ ವಾದ್ಯಗೋಷ್ಠಿ, ಮಕ್ಕಳ ನೃತ್ಯ, ಭಕ್ತಿ ಗೀತೆಗಳು ಸೇರಿದಂತೆ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಇದರ ಜೊತೆಗೆ ಲಾಟರಿ ಯೋಜನೆ ಮತ್ತು ಬಹುಮಾನಗಳನ್ನು ಇರಿಸಲಾಗಿತ್ತು. ಅ.3ರಂದು ಎಲ್ಲಾ ಗ್ರಾಮಸ್ಥರು, ಭಕ್ತಾಧಿಗಳ ಸಮ್ಮುಖದಲ್ಲಿ ಲಾಟರಿ ಡ್ರಾ ನಡೆಸಿ,‌ ಡ್ರಾ ಆದ ನಂತರ ಸ್ಥಳದಲ್ಲೇ ಬಹುಮಾನ ವಿತರಣೆ ಮಾಡಲಾಗುವುದು. ನಂತರ ಶ್ರೀ ವಿನಾಯಕನ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಡಿ.ಜೆ ನೃತ್ಯ, ತಮಟೆ, ತಾಳ, ವಾಧ್ಯ, ಮೇಳ, ಜಾನಪದ ಕಲಾ ತಂಡಗಳ ನೃತ್ಯ ನಡೆಸಿ ಅಮಾನಿಕೆರೆಯಲ್ಲಿ ವಿನಾಯಕ ವಿಸರ್ಜನೆ ಮಾಡಲಾಗುವುದು ಎಂದು ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ‌ ಮುಖಂಡರು ತಿಳಿಸಿದ್ದಾರೆ.

ಈ ವೇಳೆ ರೈಲ್ವೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್ ಮಲ್ಲಯ್ಯ, ಕನಸವಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಟಿ.ವಿಜಯ ಕುಮಾರ್, ಗಣೇಶ ಸೇವಾ ಸಮಿತಿ ಅಧ್ಯಕ್ಷ ರೇಣುಕಾ ಪ್ರಸಾದ್, ವಿ.ಎಸ್.ಎಸ್.ಎನ್ ಮಾಜಿ ನಿರ್ದೇಶಕ ವಿಶ್ವನಾಥ್, ಕನಸವಾಡಿ ಗ್ರಾ ಪಂ ಮಾಜಿ ಸದಸ್ಯ ವಿರೂಪಾಕ್ಷಯ್ಯ, ಬಿಜೆಪಿ ಯುವ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ‌ ಕೆ.ಸತೀಶ್‌ ಕುಮಾರ್, ಮುಖಂಡರಾದ ನಾರಾಯಣ ನಾಯ್ಕ್, ಶಿವು ಸೇರಿದಂತೆ‌ ಇತರರು‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

2 hours ago

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

8 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

18 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

23 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago