ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಚಿಕ್ಕಮಧುರೆ ವತಿಯಿಂದ ತಾಲೂಕಿನ ಕನಸವಾಡಿಯ ಶ್ರೀ ಶನಿಮಹಾತ್ಮ ದೇವಾಲಯದ ಬಳಿ 101 ಗಣಪತಿ ಪ್ರತಿಷ್ಠಾಪನೆ ಮಾಡಲಾಗಿತ್ತು.
ಎಲ್ಲರಿಗೂ ಒಳ್ಳೆಯದನ್ನು ಬಯಸಿ, ಉತ್ತಮ ಮಳೆ ಬೆಳೆ ಆಗಲೆಂದು, ಊರಿಗೆ ಯಾವುದೇ ವಿಘ್ನಗಳು ಎದರುಗಾಬಾರದು ಎಂದು 101 ಗಣಪತಿ ಮೂರ್ತಿಗಳನ್ನು ಒಂದೆಡೆ ಪ್ರತಿಷ್ಠಾಪಿಸಲಾಗಿದೆ.
ಮೊದಲನೇ ವರ್ಷದ ಗಣಪತಿ ಉತ್ಸವವನ್ನು ಸೆ.16ರಿಂದ ಅ.3ರವರೆಗೆ ಆಯೋಜಿಸಲಾಗಿದ್ದು, ಪ್ರತಿನಿತ್ಯ ವಾದ್ಯಗೋಷ್ಠಿ, ಮಕ್ಕಳ ನೃತ್ಯ, ಭಕ್ತಿ ಗೀತೆಗಳು ಸೇರಿದಂತೆ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಈ ವೇಳೆ ರೈಲ್ವೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್ ಮಲ್ಲಯ್ಯ, ಕನಸವಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಟಿ.ವಿಜಯ ಕುಮಾರ್, ಗಣೇಶ ಸೇವಾ ಸಮಿತಿ ಅಧ್ಯಕ್ಷ ರೇಣುಕಾ ಪ್ರಸಾದ್, ವಿ.ಎಸ್.ಎಸ್.ಎನ್ ಮಾಜಿ ನಿರ್ದೇಶಕ ವಿಶ್ವನಾಥ್, ಕನಸವಾಡಿ ಗ್ರಾ ಪಂ ಮಾಜಿ ಸದಸ್ಯ ವಿರೂಪಾಕ್ಷಯ್ಯ, ಬಿಜೆಪಿ ಯುವ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ಸತೀಶ್ ಕುಮಾರ್, ಮುಖಂಡರಾದ ನಾರಾಯಣ ನಾಯ್ಕ್, ಶಿವು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…