ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನಸವಾಡಿ ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಸೌಭಾಗ್ಯ ಉಮಾಶಂಕರ್ ಕೆ.ಸಿ, ಉಪಾಧ್ಯಕ್ಷರಾಗಿ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 19 ಸದಸ್ಯರಿರುವ ಕನಸವಾಡಿ ಗ್ರಾಮ ಪಂಚಾಯ್ತಿಯಲ್ಲಿ ನೂತನ ಅಧ್ಯಕ್ಷರಾಗಿ ಸೌಭಾಗ್ಯ ಉಮಾಶಂಕರ್ ಕೆ.ಸಿ, ಉಪಾಧ್ಯಕ್ಷರಾಗಿ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಸೌಭಾಗ್ಯ ಉಮಾಶಂಕರ್ ಕೆ.ಸಿ, ಉಪಾಧ್ಯಕ್ಷ ಸ್ಥಾನಕ್ಕೆ ರಾಜಣ್ಣ ಮಾತ್ರ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿಗಳು ಅಗತ್ಯ ಬಹುಮತ ವೀಕ್ಷಿಸಿ ಅವಿರೋಧ ಆಯ್ಕೆ ಪ್ರಕಟಿಸಿದರು.
ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಘೊಷಣೆ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲಿಗರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ನೂತನ ಅಧ್ಯಕ್ಷ ಸೌಭಾಗ್ಯ ಉಮಾಶಂಕರ್ ಕೆ.ಸಿ ಮಾತನಾಡಿ, ಪಕ್ಷಾತೀತವಾಗಿ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲು ಹಗಲಿರುಳು ದುಡಿಯುತ್ತೇನೆ. ಮೊದಲು ಆದತ್ಯೆ ಮೇರೆಗೆ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ಹೇಳಿದರು.
ನಂತರ ಉಪಾಧ್ಯಕ್ಷ ರಾಜಣ್ಣ ಮಾತನಾಡಿ, ನನ್ನನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಚಿರ ಋಣಿಯಾಗಿರುತ್ತೇನೆ. ಒಗ್ಗಟ್ಟಿನಿಂದ ನಮ್ಮ ಇತಿಮಿತಿಯಲ್ಲಿ ಕೆಲಸ ಮಾಡಲು ಅವಿರತ ದುಡಿಯುತ್ತೇನೆ ಎಂದರು.
ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಎಪಿಎಂಸಿ ಮಾಜಿ ಉಪಾಧ್ಯಕ್ಷರು ಹಾಗೂ ವಿಎಸ್ ಎಸ್ ಎನ್ ಉಪಾಧ್ಯಕ್ಷರಾದ ಮಂಜುನಾಥ್. ಟಿ, ಸದಸ್ಯರುಗಳಾದ ಟಿ.ವಿಜಿಕುಮಾರ್, ಪ್ರಭಾಕರ್, ಸುರೇಶ್, ರೇಣುಕಮ್ಮ, ರಮೇಶ್, ಶೋಭಾ, ಕೃಷ್ಣಮೂರ್ತಿ, ಶೋಭಶಂಕರ್, ಆಶಾ ನಾಗರಾಜು, K. B ಶ್ರೀನಿವಾಸ್, ರಂಗನಾಥ್, ಮಮತಾ, ಶಾಂತಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…