ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನಸವಾಡಿ ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಸೌಭಾಗ್ಯ ಉಮಾಶಂಕರ್ ಕೆ.ಸಿ, ಉಪಾಧ್ಯಕ್ಷರಾಗಿ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 19 ಸದಸ್ಯರಿರುವ ಕನಸವಾಡಿ ಗ್ರಾಮ ಪಂಚಾಯ್ತಿಯಲ್ಲಿ ನೂತನ ಅಧ್ಯಕ್ಷರಾಗಿ ಸೌಭಾಗ್ಯ ಉಮಾಶಂಕರ್ ಕೆ.ಸಿ, ಉಪಾಧ್ಯಕ್ಷರಾಗಿ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಸೌಭಾಗ್ಯ ಉಮಾಶಂಕರ್ ಕೆ.ಸಿ, ಉಪಾಧ್ಯಕ್ಷ ಸ್ಥಾನಕ್ಕೆ ರಾಜಣ್ಣ ಮಾತ್ರ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿಗಳು ಅಗತ್ಯ ಬಹುಮತ ವೀಕ್ಷಿಸಿ ಅವಿರೋಧ ಆಯ್ಕೆ ಪ್ರಕಟಿಸಿದರು.
ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಘೊಷಣೆ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲಿಗರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ನೂತನ ಅಧ್ಯಕ್ಷ ಸೌಭಾಗ್ಯ ಉಮಾಶಂಕರ್ ಕೆ.ಸಿ ಮಾತನಾಡಿ, ಪಕ್ಷಾತೀತವಾಗಿ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲು ಹಗಲಿರುಳು ದುಡಿಯುತ್ತೇನೆ. ಮೊದಲು ಆದತ್ಯೆ ಮೇರೆಗೆ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ಹೇಳಿದರು.
ನಂತರ ಉಪಾಧ್ಯಕ್ಷ ರಾಜಣ್ಣ ಮಾತನಾಡಿ, ನನ್ನನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಚಿರ ಋಣಿಯಾಗಿರುತ್ತೇನೆ. ಒಗ್ಗಟ್ಟಿನಿಂದ ನಮ್ಮ ಇತಿಮಿತಿಯಲ್ಲಿ ಕೆಲಸ ಮಾಡಲು ಅವಿರತ ದುಡಿಯುತ್ತೇನೆ ಎಂದರು.
ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಎಪಿಎಂಸಿ ಮಾಜಿ ಉಪಾಧ್ಯಕ್ಷರು ಹಾಗೂ ವಿಎಸ್ ಎಸ್ ಎನ್ ಉಪಾಧ್ಯಕ್ಷರಾದ ಮಂಜುನಾಥ್. ಟಿ, ಸದಸ್ಯರುಗಳಾದ ಟಿ.ವಿಜಿಕುಮಾರ್, ಪ್ರಭಾಕರ್, ಸುರೇಶ್, ರೇಣುಕಮ್ಮ, ರಮೇಶ್, ಶೋಭಾ, ಕೃಷ್ಣಮೂರ್ತಿ, ಶೋಭಶಂಕರ್, ಆಶಾ ನಾಗರಾಜು, K. B ಶ್ರೀನಿವಾಸ್, ರಂಗನಾಥ್, ಮಮತಾ, ಶಾಂತಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…