ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನಸವಾಡಿ ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಸೌಭಾಗ್ಯ ಉಮಾಶಂಕರ್ ಕೆ.ಸಿ, ಉಪಾಧ್ಯಕ್ಷರಾಗಿ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 19 ಸದಸ್ಯರಿರುವ ಕನಸವಾಡಿ ಗ್ರಾಮ ಪಂಚಾಯ್ತಿಯಲ್ಲಿ ನೂತನ ಅಧ್ಯಕ್ಷರಾಗಿ ಸೌಭಾಗ್ಯ ಉಮಾಶಂಕರ್ ಕೆ.ಸಿ, ಉಪಾಧ್ಯಕ್ಷರಾಗಿ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಸೌಭಾಗ್ಯ ಉಮಾಶಂಕರ್ ಕೆ.ಸಿ, ಉಪಾಧ್ಯಕ್ಷ ಸ್ಥಾನಕ್ಕೆ ರಾಜಣ್ಣ ಮಾತ್ರ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿಗಳು ಅಗತ್ಯ ಬಹುಮತ ವೀಕ್ಷಿಸಿ ಅವಿರೋಧ ಆಯ್ಕೆ ಪ್ರಕಟಿಸಿದರು.
ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಘೊಷಣೆ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲಿಗರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ನೂತನ ಅಧ್ಯಕ್ಷ ಸೌಭಾಗ್ಯ ಉಮಾಶಂಕರ್ ಕೆ.ಸಿ ಮಾತನಾಡಿ, ಪಕ್ಷಾತೀತವಾಗಿ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲು ಹಗಲಿರುಳು ದುಡಿಯುತ್ತೇನೆ. ಮೊದಲು ಆದತ್ಯೆ ಮೇರೆಗೆ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ಹೇಳಿದರು.
ನಂತರ ಉಪಾಧ್ಯಕ್ಷ ರಾಜಣ್ಣ ಮಾತನಾಡಿ, ನನ್ನನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಚಿರ ಋಣಿಯಾಗಿರುತ್ತೇನೆ. ಒಗ್ಗಟ್ಟಿನಿಂದ ನಮ್ಮ ಇತಿಮಿತಿಯಲ್ಲಿ ಕೆಲಸ ಮಾಡಲು ಅವಿರತ ದುಡಿಯುತ್ತೇನೆ ಎಂದರು.
ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಎಪಿಎಂಸಿ ಮಾಜಿ ಉಪಾಧ್ಯಕ್ಷರು ಹಾಗೂ ವಿಎಸ್ ಎಸ್ ಎನ್ ಉಪಾಧ್ಯಕ್ಷರಾದ ಮಂಜುನಾಥ್. ಟಿ, ಸದಸ್ಯರುಗಳಾದ ಟಿ.ವಿಜಿಕುಮಾರ್, ಪ್ರಭಾಕರ್, ಸುರೇಶ್, ರೇಣುಕಮ್ಮ, ರಮೇಶ್, ಶೋಭಾ, ಕೃಷ್ಣಮೂರ್ತಿ, ಶೋಭಶಂಕರ್, ಆಶಾ ನಾಗರಾಜು, K. B ಶ್ರೀನಿವಾಸ್, ರಂಗನಾಥ್, ಮಮತಾ, ಶಾಂತಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…