ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನಸವಾಡಿ ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಸೌಭಾಗ್ಯ ಉಮಾಶಂಕರ್ ಕೆ.ಸಿ, ಉಪಾಧ್ಯಕ್ಷರಾಗಿ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 19 ಸದಸ್ಯರಿರುವ ಕನಸವಾಡಿ ಗ್ರಾಮ ಪಂಚಾಯ್ತಿಯಲ್ಲಿ ನೂತನ ಅಧ್ಯಕ್ಷರಾಗಿ ಸೌಭಾಗ್ಯ ಉಮಾಶಂಕರ್ ಕೆ.ಸಿ, ಉಪಾಧ್ಯಕ್ಷರಾಗಿ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಸೌಭಾಗ್ಯ ಉಮಾಶಂಕರ್ ಕೆ.ಸಿ, ಉಪಾಧ್ಯಕ್ಷ ಸ್ಥಾನಕ್ಕೆ ರಾಜಣ್ಣ ಮಾತ್ರ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿಗಳು ಅಗತ್ಯ ಬಹುಮತ ವೀಕ್ಷಿಸಿ ಅವಿರೋಧ ಆಯ್ಕೆ ಪ್ರಕಟಿಸಿದರು.
ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಘೊಷಣೆ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲಿಗರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ನೂತನ ಅಧ್ಯಕ್ಷ ಸೌಭಾಗ್ಯ ಉಮಾಶಂಕರ್ ಕೆ.ಸಿ ಮಾತನಾಡಿ, ಪಕ್ಷಾತೀತವಾಗಿ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲು ಹಗಲಿರುಳು ದುಡಿಯುತ್ತೇನೆ. ಮೊದಲು ಆದತ್ಯೆ ಮೇರೆಗೆ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ಹೇಳಿದರು.
ನಂತರ ಉಪಾಧ್ಯಕ್ಷ ರಾಜಣ್ಣ ಮಾತನಾಡಿ, ನನ್ನನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಚಿರ ಋಣಿಯಾಗಿರುತ್ತೇನೆ. ಒಗ್ಗಟ್ಟಿನಿಂದ ನಮ್ಮ ಇತಿಮಿತಿಯಲ್ಲಿ ಕೆಲಸ ಮಾಡಲು ಅವಿರತ ದುಡಿಯುತ್ತೇನೆ ಎಂದರು.
ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಎಪಿಎಂಸಿ ಮಾಜಿ ಉಪಾಧ್ಯಕ್ಷರು ಹಾಗೂ ವಿಎಸ್ ಎಸ್ ಎನ್ ಉಪಾಧ್ಯಕ್ಷರಾದ ಮಂಜುನಾಥ್. ಟಿ, ಸದಸ್ಯರುಗಳಾದ ಟಿ.ವಿಜಿಕುಮಾರ್, ಪ್ರಭಾಕರ್, ಸುರೇಶ್, ರೇಣುಕಮ್ಮ, ರಮೇಶ್, ಶೋಭಾ, ಕೃಷ್ಣಮೂರ್ತಿ, ಶೋಭಶಂಕರ್, ಆಶಾ ನಾಗರಾಜು, K. B ಶ್ರೀನಿವಾಸ್, ರಂಗನಾಥ್, ಮಮತಾ, ಶಾಂತಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…