ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ಬರುವ ಕನಸವಾಡಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜುಗುತ್ತಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ಈ ಕೆಳಕಂಡ ಗ್ರಾಮಗಳಲ್ಲಿ ಜೂನ್ 6ರ ಬೆಳಗ್ಗೆ 10ರಿಂದ ಸಂಜೆ 5:30 ರವರಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ, ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್,ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಲು ದೊಡ್ಡಬಳ್ಳಾಪುರ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್, ಕಾರ್ಯ ಮತ್ತು ಪಾಲನ ಗ್ರಾಮೀಣ ಉಪ ವಿಭಾಗ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಯಾವ ಯಾವ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತ
ದೊಡ್ಡಬಳ್ಳಾಪುರ ತಾಲ್ಲೂಕು ವ್ಯಾಪ್ತಿಯ ಕನಸವಾಡಿ, ಮದುರೆ, ಕಾಡನೂರು, ನಾಗೇನಹಳ್ಳಿ, ಕಾಡನೂರುಪಾಳ್ಯ ಚನ್ನಾದೇವಿಅಗ್ರಾಹಾರ, ಕಾರೇಪುರ, ಮದಗೋಂಡನಹಳ್ಳಿ, ಹೊನ್ನಾದೇವಿಪುರ, ಹೊನ್ನಾವಾರ, ಕಾರೇಪುರ, ರಾಮದೇವನಹಳ್ಳಿ, ಗಂಡ್ರಗೊಳಿಪುರ, ಕನ್ನಮಂಗಲ, ಬೀರಯ್ಯನಪಾಳ್ಯ, ಕೇಂಜಿಗನಹಳ್ಳಿ, ಬಂಡಯ್ಯನಪಾಳ್ಯ, ಕೋಡಿಹಳ್ಳಿ, ಮಲೋಹಳ್ಳಿ, ಭದ್ರಾಪುರ ಶಾಸ್ತ್ರೀಪಾಳ್ಯ, ಮುಪ್ಪಡಿಘಟ್ಟ, ಕಮ್ಮಸಂದ್ರ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5-30 ರ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಹಾಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಲಾಗಿದೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…