ಕನಸವಾಡಿ ವ್ಯವಸಾಯ ಸೇವಾ ಸಹಕಾರ ಸಂಘ ಕಾಂಗ್ರೆಸ್ ತೆಕ್ಕೆಗೆ: 12ಕ್ಕೆ‌12 ಸ್ಥಾನ ಗೆದ್ದ ಕಾಂಗ್ರೆಸ್: ನೂತನ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿದ‌ ಗಣ್ಯರು

ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿ ಕನಸವಾಡಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಫೆ. 27ರಂದು ಚುನಾವಣೆ ನಡೆದಿತ್ತು.‌ ಶುಕ್ರವಾರ (ಮೇ.2) ಇದರ ಫಲಿತಾಂಶ ಹೊರಬಿದ್ದಿದ್ದು, ಫಲಿತಾಂಶದಲ್ಲಿ ಕಾಂಗ್ರೆಸ್ ಬೆಂಬಲಿತ 12 ಮಂದಿ ಗೆದ್ದು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಈ ಕುರಿತು “ಪಬ್ಲಿಕ್ ಮಿರ್ಚಿ” ಯೊಂದಿಗೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಮಾತನಾಡಿ, ಕಳೆದ 25 ವರ್ಷಗಳಿಂದ ಚುನಾವಣೆ ನಡೆದಿರಲಿಲ್ಲ. 25 ವರ್ಷಗಳಿಂದಲೂ ಸೊಸೈಟಿ ಅಭಿವೃದ್ಧಿಗಾಗಿ ಅವಿರೋಧ ಆಯ್ಕೆಯ ನಿರ್ಧಾರ ಕೈಗೊಂಡು ಚುನಾವಣೆ ಕೈಬಿಡಲಾಗುತ್ತಿತ್ತು. ಆದರೆ ಈ ಬಾರಿ ಶಾಸಕ ಧೀರಜ್ ಮುನಿರಾಜ್ ಅವರು ಇಲ್ಲಿ ಚುನಾವಣೆ ಮಾಡಲೇಬೇಕು ಎಂದು ನಿರ್ಧಾರ ಮಾಡಿದರು. ಈ ಚುನಾವಣೆಯಲ್ಲಿ ನಾವೇ ಗೆದ್ದಿದ್ದೇವೆ ಎಂದರು.

ತಾಲೂಕಿನಲ್ಲಿ 15 ವರ್ಷಗಳಿಂದೆ ಸೊಸೈಟಿಗಳು 15 ಇರಲಿಲ್ಲ. ಇಂದು 28 ಸೊಸೈಟಿಗಳನ್ನ ಮಾಡಿದ್ದೇವೆ. ಪ್ರತಿಯೊಂದು ಸೊಸೈಟಿಗಳಿಂದ ರೈತರಿಗೆ ಕನಿಷ್ಟ‌ 5 ಕೋಟಿ ಸಾಲ ನೀಡಿದ್ದೇವೆ. ಸರ್ಕಾರದಿಂದ ಎರಡೆರಡು ಬಾರಿ ಸುಮಾರು 100 ಕೋಟಿಯಷ್ಟು ಸಾಲ ಮನ್ನಾ ಆಗಿದೆ. ಕನಸವಾಡಿ ಸೊಸೈಟಿ ಸುಮಾರು 1 ಕೋಟಿ ಲಾಭದಲ್ಲಿದೆ. ಆ ಕೋಟಿ ಲಾಭದಲ್ಲಿ ಸೊಸೈಟಿ ಅಭಿವೃದ್ಧಿಗೆ ಬಳಕೆ ಮಾಡುತ್ತಿದ್ದೇವೆ. ಸೊಸೈಟಿಗಾಗಿ ನೂತನ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ತಾಲೂಕಿನಲ್ಲಿ ಸೊಸೈಟಿಗಳಿಗಾಗಿ ಇಂತಹ ಸುಮಾರು 8 ನೂತನ ಕಟ್ಟಡಗಳನ್ನ ನಿರ್ಮಾಣ ಮಾಡಿದ್ದೇನೆ. ಕಟ್ಟಡಗಳ ನಿರ್ಮಾಣಕ್ಕೆ ಒಂದು ರೂಪಾಯಿ ಸೊಸೈಟಿ ಹಣ ಬಳಕೆ ಮಾಡುತ್ತಿಲ್ಲ. ಎಂಎಲ್ಎ ಅನುದಾನ, ಎಂಎಲ್ಸಿ ಅನುದಾನ, ಜಿಲ್ಲಾ ಬ್ಯಾಂಕ್, ಅಪೆಕ್ಸ್ ಬ್ಯಾಂಕ್ ಸೇರಿದಂತೆ ಇತರೆ ಮೂಲಗಳಿಂದ ಅನುದಾನ ತಂದು ಸುಮಾರು 8 ನೂತನ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದೇವೆ‌. ಇನ್ನೂ 5 ಕಟ್ಟಡಗಳಿಗೆ ಅಡಿಪಾಯ ಹಾಕಿಸಿದ್ದೇನೆ. ಜನ ಈ ಎಲ್ಲಾ ಕೆಲಸಗಳನ್ನ ನೊಡಿ ನಮಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದರು.

ಹೊನ್ನಾವರ ಹಾಗೂ ಕನಸವಾಡಿ ಗ್ರಾಮ ಪಂಚಾಯಿತಿಯ ಮತದಾರರು ಸೇರಿ‌ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ಹಾಕಿ ಗೆಲ್ಲಿಸಿದ್ದಾರೆ. ಎಲ್ಲರಿಗೂ ನಾವು ಚಿರ ಋಣಿಯಾಗಿ ಇರುತ್ತೇವೆ. ಇದಕ್ಕೆ ಸಹಕರಿಸಿದ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ಆಯ್ಕೆಯಾದವರ ಪಟ್ಟಿ….

ಅಭ್ಯರ್ಥಿಯ ಹೆಸರು            ಪಡೆದ ಮತಗಳು

1. ಚುಂಚೇಗೌಡ.            ‌‌‌‌‌‌‌‌‌‌          457

2. ಎನ್.ಎಸ್ ಕೃಷ್ಣಪ್ಪ.                 418

3. ಆ‌ರ್.ವಿ ಗೌಡ.                       395

4. ಎಂ ಶಿವಣ್ಣ.                           377

5. ಸಿದ್ದಲಿಂಗಸ್ವಾಮಿ                     365

6. ಆ‌ರ್.ಎಂ ಮುನಿರಾಜು            422

7. ಟಿ ಮಂಜುನಾಥ್                    438

8. ಬಿ ಲಕ್ಷ್ಮೀಕೆಂಪಯ್ಯ.                  400

9. ಎನ್ ವಿಶ್ವನಾಥ್                      352

10. ಇಂದ್ರಮ್ಮ.                            388

11. ಎಂ ಪ್ರಮೀಳಾ                      384

12. ಪ್ರಭಾಕರ್                             082

ಸೊಸೈಟಿಗೆ ನೂತನವಾಗಿ ಆಯ್ಕೆಯಾದ ನಿರ್ದೇಶಕರಿಗೆ ಗಣ್ಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಹೂವಿನಾರ ಹಾಕಿ, ಸಿಹಿ ತಿನಿಸಿ, ಪಟಾಕಿ ಸಿಡಿಸಿ ಅಭನಂದನೆ ಸಲ್ಲಿಸಿ ಸಂಭ್ರಮಿಸಿದರು.

ಈ ವೇಳೆ ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಅಶ್ವತ್ ನಾರಾಯಣ ಗೌಡ, ಕಾಂಗ್ರೆಸ್ ಮುಖಂಡ ದೊಡ್ಡತುಮಕೂರು ರಾಮಕೃಷ್ಣಪ್ಪ, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

6 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

7 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

12 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

14 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

18 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

19 hours ago