ಕನಸವಾಡಿ ವ್ಯವಸಾಯ ಸೇವಾ ಸಹಕಾರ ಸಂಘ ಕಾಂಗ್ರೆಸ್ ತೆಕ್ಕೆಗೆ: 12ಕ್ಕೆ‌12 ಸ್ಥಾನ ಗೆದ್ದ ಕಾಂಗ್ರೆಸ್: ನೂತನ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿದ‌ ಗಣ್ಯರು

ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿ ಕನಸವಾಡಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಫೆ. 27ರಂದು ಚುನಾವಣೆ ನಡೆದಿತ್ತು.‌ ಶುಕ್ರವಾರ (ಮೇ.2) ಇದರ ಫಲಿತಾಂಶ ಹೊರಬಿದ್ದಿದ್ದು, ಫಲಿತಾಂಶದಲ್ಲಿ ಕಾಂಗ್ರೆಸ್ ಬೆಂಬಲಿತ 12 ಮಂದಿ ಗೆದ್ದು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಈ ಕುರಿತು “ಪಬ್ಲಿಕ್ ಮಿರ್ಚಿ” ಯೊಂದಿಗೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಮಾತನಾಡಿ, ಕಳೆದ 25 ವರ್ಷಗಳಿಂದ ಚುನಾವಣೆ ನಡೆದಿರಲಿಲ್ಲ. 25 ವರ್ಷಗಳಿಂದಲೂ ಸೊಸೈಟಿ ಅಭಿವೃದ್ಧಿಗಾಗಿ ಅವಿರೋಧ ಆಯ್ಕೆಯ ನಿರ್ಧಾರ ಕೈಗೊಂಡು ಚುನಾವಣೆ ಕೈಬಿಡಲಾಗುತ್ತಿತ್ತು. ಆದರೆ ಈ ಬಾರಿ ಶಾಸಕ ಧೀರಜ್ ಮುನಿರಾಜ್ ಅವರು ಇಲ್ಲಿ ಚುನಾವಣೆ ಮಾಡಲೇಬೇಕು ಎಂದು ನಿರ್ಧಾರ ಮಾಡಿದರು. ಈ ಚುನಾವಣೆಯಲ್ಲಿ ನಾವೇ ಗೆದ್ದಿದ್ದೇವೆ ಎಂದರು.

ತಾಲೂಕಿನಲ್ಲಿ 15 ವರ್ಷಗಳಿಂದೆ ಸೊಸೈಟಿಗಳು 15 ಇರಲಿಲ್ಲ. ಇಂದು 28 ಸೊಸೈಟಿಗಳನ್ನ ಮಾಡಿದ್ದೇವೆ. ಪ್ರತಿಯೊಂದು ಸೊಸೈಟಿಗಳಿಂದ ರೈತರಿಗೆ ಕನಿಷ್ಟ‌ 5 ಕೋಟಿ ಸಾಲ ನೀಡಿದ್ದೇವೆ. ಸರ್ಕಾರದಿಂದ ಎರಡೆರಡು ಬಾರಿ ಸುಮಾರು 100 ಕೋಟಿಯಷ್ಟು ಸಾಲ ಮನ್ನಾ ಆಗಿದೆ. ಕನಸವಾಡಿ ಸೊಸೈಟಿ ಸುಮಾರು 1 ಕೋಟಿ ಲಾಭದಲ್ಲಿದೆ. ಆ ಕೋಟಿ ಲಾಭದಲ್ಲಿ ಸೊಸೈಟಿ ಅಭಿವೃದ್ಧಿಗೆ ಬಳಕೆ ಮಾಡುತ್ತಿದ್ದೇವೆ. ಸೊಸೈಟಿಗಾಗಿ ನೂತನ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ತಾಲೂಕಿನಲ್ಲಿ ಸೊಸೈಟಿಗಳಿಗಾಗಿ ಇಂತಹ ಸುಮಾರು 8 ನೂತನ ಕಟ್ಟಡಗಳನ್ನ ನಿರ್ಮಾಣ ಮಾಡಿದ್ದೇನೆ. ಕಟ್ಟಡಗಳ ನಿರ್ಮಾಣಕ್ಕೆ ಒಂದು ರೂಪಾಯಿ ಸೊಸೈಟಿ ಹಣ ಬಳಕೆ ಮಾಡುತ್ತಿಲ್ಲ. ಎಂಎಲ್ಎ ಅನುದಾನ, ಎಂಎಲ್ಸಿ ಅನುದಾನ, ಜಿಲ್ಲಾ ಬ್ಯಾಂಕ್, ಅಪೆಕ್ಸ್ ಬ್ಯಾಂಕ್ ಸೇರಿದಂತೆ ಇತರೆ ಮೂಲಗಳಿಂದ ಅನುದಾನ ತಂದು ಸುಮಾರು 8 ನೂತನ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದೇವೆ‌. ಇನ್ನೂ 5 ಕಟ್ಟಡಗಳಿಗೆ ಅಡಿಪಾಯ ಹಾಕಿಸಿದ್ದೇನೆ. ಜನ ಈ ಎಲ್ಲಾ ಕೆಲಸಗಳನ್ನ ನೊಡಿ ನಮಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದರು.

ಹೊನ್ನಾವರ ಹಾಗೂ ಕನಸವಾಡಿ ಗ್ರಾಮ ಪಂಚಾಯಿತಿಯ ಮತದಾರರು ಸೇರಿ‌ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ಹಾಕಿ ಗೆಲ್ಲಿಸಿದ್ದಾರೆ. ಎಲ್ಲರಿಗೂ ನಾವು ಚಿರ ಋಣಿಯಾಗಿ ಇರುತ್ತೇವೆ. ಇದಕ್ಕೆ ಸಹಕರಿಸಿದ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ಆಯ್ಕೆಯಾದವರ ಪಟ್ಟಿ….

ಅಭ್ಯರ್ಥಿಯ ಹೆಸರು            ಪಡೆದ ಮತಗಳು

1. ಚುಂಚೇಗೌಡ.            ‌‌‌‌‌‌‌‌‌‌          457

2. ಎನ್.ಎಸ್ ಕೃಷ್ಣಪ್ಪ.                 418

3. ಆ‌ರ್.ವಿ ಗೌಡ.                       395

4. ಎಂ ಶಿವಣ್ಣ.                           377

5. ಸಿದ್ದಲಿಂಗಸ್ವಾಮಿ                     365

6. ಆ‌ರ್.ಎಂ ಮುನಿರಾಜು            422

7. ಟಿ ಮಂಜುನಾಥ್                    438

8. ಬಿ ಲಕ್ಷ್ಮೀಕೆಂಪಯ್ಯ.                  400

9. ಎನ್ ವಿಶ್ವನಾಥ್                      352

10. ಇಂದ್ರಮ್ಮ.                            388

11. ಎಂ ಪ್ರಮೀಳಾ                      384

12. ಪ್ರಭಾಕರ್                             082

ಸೊಸೈಟಿಗೆ ನೂತನವಾಗಿ ಆಯ್ಕೆಯಾದ ನಿರ್ದೇಶಕರಿಗೆ ಗಣ್ಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಹೂವಿನಾರ ಹಾಕಿ, ಸಿಹಿ ತಿನಿಸಿ, ಪಟಾಕಿ ಸಿಡಿಸಿ ಅಭನಂದನೆ ಸಲ್ಲಿಸಿ ಸಂಭ್ರಮಿಸಿದರು.

ಈ ವೇಳೆ ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಅಶ್ವತ್ ನಾರಾಯಣ ಗೌಡ, ಕಾಂಗ್ರೆಸ್ ಮುಖಂಡ ದೊಡ್ಡತುಮಕೂರು ರಾಮಕೃಷ್ಣಪ್ಪ, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

4 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago