ಕನಸವಾಡಿ ವ್ಯವಸಾಯ ಸೇವಾ ಸಹಕಾರ ಸಂಘ ಕಾಂಗ್ರೆಸ್ ತೆಕ್ಕೆಗೆ: 12ಕ್ಕೆ‌12 ಸ್ಥಾನ ಗೆದ್ದ ಕಾಂಗ್ರೆಸ್: ನೂತನ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿದ‌ ಗಣ್ಯರು

ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿ ಕನಸವಾಡಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಫೆ. 27ರಂದು ಚುನಾವಣೆ ನಡೆದಿತ್ತು.‌ ಶುಕ್ರವಾರ (ಮೇ.2) ಇದರ ಫಲಿತಾಂಶ ಹೊರಬಿದ್ದಿದ್ದು, ಫಲಿತಾಂಶದಲ್ಲಿ ಕಾಂಗ್ರೆಸ್ ಬೆಂಬಲಿತ 12 ಮಂದಿ ಗೆದ್ದು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಈ ಕುರಿತು “ಪಬ್ಲಿಕ್ ಮಿರ್ಚಿ” ಯೊಂದಿಗೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಮಾತನಾಡಿ, ಕಳೆದ 25 ವರ್ಷಗಳಿಂದ ಚುನಾವಣೆ ನಡೆದಿರಲಿಲ್ಲ. 25 ವರ್ಷಗಳಿಂದಲೂ ಸೊಸೈಟಿ ಅಭಿವೃದ್ಧಿಗಾಗಿ ಅವಿರೋಧ ಆಯ್ಕೆಯ ನಿರ್ಧಾರ ಕೈಗೊಂಡು ಚುನಾವಣೆ ಕೈಬಿಡಲಾಗುತ್ತಿತ್ತು. ಆದರೆ ಈ ಬಾರಿ ಶಾಸಕ ಧೀರಜ್ ಮುನಿರಾಜ್ ಅವರು ಇಲ್ಲಿ ಚುನಾವಣೆ ಮಾಡಲೇಬೇಕು ಎಂದು ನಿರ್ಧಾರ ಮಾಡಿದರು. ಈ ಚುನಾವಣೆಯಲ್ಲಿ ನಾವೇ ಗೆದ್ದಿದ್ದೇವೆ ಎಂದರು.

ತಾಲೂಕಿನಲ್ಲಿ 15 ವರ್ಷಗಳಿಂದೆ ಸೊಸೈಟಿಗಳು 15 ಇರಲಿಲ್ಲ. ಇಂದು 28 ಸೊಸೈಟಿಗಳನ್ನ ಮಾಡಿದ್ದೇವೆ. ಪ್ರತಿಯೊಂದು ಸೊಸೈಟಿಗಳಿಂದ ರೈತರಿಗೆ ಕನಿಷ್ಟ‌ 5 ಕೋಟಿ ಸಾಲ ನೀಡಿದ್ದೇವೆ. ಸರ್ಕಾರದಿಂದ ಎರಡೆರಡು ಬಾರಿ ಸುಮಾರು 100 ಕೋಟಿಯಷ್ಟು ಸಾಲ ಮನ್ನಾ ಆಗಿದೆ. ಕನಸವಾಡಿ ಸೊಸೈಟಿ ಸುಮಾರು 1 ಕೋಟಿ ಲಾಭದಲ್ಲಿದೆ. ಆ ಕೋಟಿ ಲಾಭದಲ್ಲಿ ಸೊಸೈಟಿ ಅಭಿವೃದ್ಧಿಗೆ ಬಳಕೆ ಮಾಡುತ್ತಿದ್ದೇವೆ. ಸೊಸೈಟಿಗಾಗಿ ನೂತನ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ತಾಲೂಕಿನಲ್ಲಿ ಸೊಸೈಟಿಗಳಿಗಾಗಿ ಇಂತಹ ಸುಮಾರು 8 ನೂತನ ಕಟ್ಟಡಗಳನ್ನ ನಿರ್ಮಾಣ ಮಾಡಿದ್ದೇನೆ. ಕಟ್ಟಡಗಳ ನಿರ್ಮಾಣಕ್ಕೆ ಒಂದು ರೂಪಾಯಿ ಸೊಸೈಟಿ ಹಣ ಬಳಕೆ ಮಾಡುತ್ತಿಲ್ಲ. ಎಂಎಲ್ಎ ಅನುದಾನ, ಎಂಎಲ್ಸಿ ಅನುದಾನ, ಜಿಲ್ಲಾ ಬ್ಯಾಂಕ್, ಅಪೆಕ್ಸ್ ಬ್ಯಾಂಕ್ ಸೇರಿದಂತೆ ಇತರೆ ಮೂಲಗಳಿಂದ ಅನುದಾನ ತಂದು ಸುಮಾರು 8 ನೂತನ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದೇವೆ‌. ಇನ್ನೂ 5 ಕಟ್ಟಡಗಳಿಗೆ ಅಡಿಪಾಯ ಹಾಕಿಸಿದ್ದೇನೆ. ಜನ ಈ ಎಲ್ಲಾ ಕೆಲಸಗಳನ್ನ ನೊಡಿ ನಮಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದರು.

ಹೊನ್ನಾವರ ಹಾಗೂ ಕನಸವಾಡಿ ಗ್ರಾಮ ಪಂಚಾಯಿತಿಯ ಮತದಾರರು ಸೇರಿ‌ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ಹಾಕಿ ಗೆಲ್ಲಿಸಿದ್ದಾರೆ. ಎಲ್ಲರಿಗೂ ನಾವು ಚಿರ ಋಣಿಯಾಗಿ ಇರುತ್ತೇವೆ. ಇದಕ್ಕೆ ಸಹಕರಿಸಿದ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ಆಯ್ಕೆಯಾದವರ ಪಟ್ಟಿ….

ಅಭ್ಯರ್ಥಿಯ ಹೆಸರು            ಪಡೆದ ಮತಗಳು

1. ಚುಂಚೇಗೌಡ.            ‌‌‌‌‌‌‌‌‌‌          457

2. ಎನ್.ಎಸ್ ಕೃಷ್ಣಪ್ಪ.                 418

3. ಆ‌ರ್.ವಿ ಗೌಡ.                       395

4. ಎಂ ಶಿವಣ್ಣ.                           377

5. ಸಿದ್ದಲಿಂಗಸ್ವಾಮಿ                     365

6. ಆ‌ರ್.ಎಂ ಮುನಿರಾಜು            422

7. ಟಿ ಮಂಜುನಾಥ್                    438

8. ಬಿ ಲಕ್ಷ್ಮೀಕೆಂಪಯ್ಯ.                  400

9. ಎನ್ ವಿಶ್ವನಾಥ್                      352

10. ಇಂದ್ರಮ್ಮ.                            388

11. ಎಂ ಪ್ರಮೀಳಾ                      384

12. ಪ್ರಭಾಕರ್                             082

ಸೊಸೈಟಿಗೆ ನೂತನವಾಗಿ ಆಯ್ಕೆಯಾದ ನಿರ್ದೇಶಕರಿಗೆ ಗಣ್ಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಹೂವಿನಾರ ಹಾಕಿ, ಸಿಹಿ ತಿನಿಸಿ, ಪಟಾಕಿ ಸಿಡಿಸಿ ಅಭನಂದನೆ ಸಲ್ಲಿಸಿ ಸಂಭ್ರಮಿಸಿದರು.

ಈ ವೇಳೆ ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಅಶ್ವತ್ ನಾರಾಯಣ ಗೌಡ, ಕಾಂಗ್ರೆಸ್ ಮುಖಂಡ ದೊಡ್ಡತುಮಕೂರು ರಾಮಕೃಷ್ಣಪ್ಪ, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

1 hour ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

2 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

13 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

14 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago