2025-26 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಉತ್ತಮ ಗುಣಮಟ್ಟದ ರಾಗಿಯನ್ನು ಪ್ರತಿ ಕ್ವಿಂಟಾಲ್ಗೆ ₹4,886 ರಂತೆ ಖರೀದಿಸಲಾಗುತ್ತಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ರಾಗಿ ಬೆಳೆಗಾರರು ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದ್ದಾರೆ.
ಕ್ಷೇತ್ರದ ರೈತರು ಎಪಿಎಂಸಿಯ ಯಾರ್ಡ್ನ ರೈತ ಭವನ ಕೇಂದ್ರದಲ್ಲಿ ಮತ್ತು ಸಾಸಲು ಹೋಬಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಫ್ರೂಟ್ಸ್ ಗುರುತಿನ ಸಂಖ್ಯೆಯ ಜೊತೆಗೆ ಆಧಾರ್ ಕಾರ್ಡ್ ದಾಖಲಾತಿಗಳನ್ನು ನೀಡಿ ನೋಂದಣಿ ಮಾಡಿಸಬಹುದು ಎಂದು ಹೇಳಿದ್ದಾರೆ.
ನೋಂದಣಿಯು 12 ಡಿಸೆಂಬರ್ 2025 ರ ವರೆಗೆ ನಡೆಯಲಿದ್ದು, ಖರೀದಿ ಕಾರ್ಯವು 1 ಜನವರಿ 2026 ರಿಂದ ಪ್ರಾರಂಭಗೊಂಡು 31 ಮಾರ್ಚ್ 2026 ರ ವರೆಗೆ ನಡೆಯಲಿದೆ ಎಂದರು.
ಕಳೆದ 2 ವರ್ಷಗಳಿಂದ ಇಡೀ ರಾಜ್ಯದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಅತಿ ಹೆಚ್ಚು ರಾಗಿ ನೀಡಿದೆ. ಕೇಂದ್ರ ಸರ್ಕಾರ ಈ ಬಾರಿಯೂ ಉತ್ತಮ ಬೆಲೆ ನಿಗದಿಪಡಿಸಿದ್ದು, ಕ್ಷೇತ್ರದ ರೈತರು ನೋಂದಣಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರುತ್ತೇನೆ ಎಂದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…