ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್‌ ಟನ್ ಮೆಕ್ಕೆಜೋಳ ಖರೀದಿ- ಇನ್ನೂ 76,430 ಮೆಟ್ರಿಕ್‌ ಟನ್‌ ಖರೀದಿಸಲು ಬಾಕಿಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು ಈ ಕೆಳಕಂಡಂತಿವೆ ನೋಡಿ…..

– ರಾಜ್ಯದಲ್ಲಿ ಅನುಮೋದನೆಗೊಂಡಿರುವ ಎಲ್ಲಾ ರೈಲು ಯೋಜನೆಗಳಿಗೆ ಒಟ್ಟು 16,554 ಎಕರೆ ಭೂಮಿ ಅವಶ್ಯಕತೆ ಇರುತ್ತದೆ. ಇದರ ಪೈಕಿ ಶೇಕಡಾ 84% ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇನ್ನೂ ಅಂದಾಜು 2,685 ಎಕರೆಗಳಷ್ಟು ಭೂಮಿ ಸ್ವಾಧೀನ ಪಡಿಸಿಕೊಳ್ಳಬೇಕಿದೆ.

– ರಾಜ್ಯದಲ್ಲಿ ಪ್ರಗತಿಯಲ್ಲಿರುವ ವಿವಿಧ ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ನಿರ್ಮಾಣ ಕಾಮಗಾರಿಗಳಿಗೆ ರೂ.2,581.67 ಕೋಟಿ,  ಭೂಸ್ವಾಧೀನ ಪ್ರಕ್ರಿಯೆಗೆ ರೂ. 2950.22 ಕೋಟಿ ಬಿಡುಗಡೆ ಮಾಡಲಾಗಿದೆ.

– ರಾಜ್ಯದಲ್ಲಿ ಒಟ್ಟು 6 ವಿಮಾನ ನಿಲ್ದಾಣಗಳ ಕಾಮಗಾರಿಗಳು ಅನುಷ್ಠಾನದ ವಿವಿಧ ಹಂತದಲ್ಲಿವೆ.  ಹಾಸನ ವಿಮಾನ ನಿಲ್ದಾಣ ಭೂ ಸ್ವಾಧೀನ ಪರಿಹಾರವನ್ನು ರೈತರಿಗೆ ಆದಷ್ಟು ಬೇಗನೆ ವಿತರಿಸಬೇಕು. ಎಲ್ಲಾ ವಿಮಾನ ನಿಲ್ದಾಣಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಇರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು.

– ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್‌ ಟನ್ ಮೆಕ್ಕೆಜೋಳ ಖರೀದಿ ಮಾಡಿದ್ದು, ಇನ್ನೂ 76,430 ಮೆಟ್ರಿಕ್‌ ಟನ್‌ ಖರೀದಿಸಲು ಬಾಕಿಯಿದೆ. ಒಟ್ಟು 93,782 ಮೆಟ್ರಿಕ್‌ ಟನ್‌ ಮೆಕ್ಕೆಜೋಳ ಖರೀದಿಗೆ ಇಂಡೆಂಟ್‌ ಪಡೆಯಲಾಗಿದ್ದು, ನಿಗದಿತ ಪ್ರಮಾಣದ ಮೆಕ್ಕೆಜೋಳ ಖರೀದಿಗೆ ಕ್ರಮ ಕೈಗೊಳ್ಳಬೇಕು.

– ಎಥೆನಾಲ್ ಖರೀದಿ ಕುರಿತಾಗಿ ಕೇಂದ್ರ ಸರ್ಕಾರಕ್ಕೆ ಮಾಡಿದ್ದ ಮನವಿಗೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿರುವುದಿಲ್ಲ. ಕೇಂದ್ರ ಸರ್ಕಾರ ರಾಜ್ಯದ ಮೆಕ್ಕೆಜೋಳ ಬೆಳೆಗಾರರ ಕುರಿತು ನಕಾರಾತ್ಮಕ ಧೋರಣೆಯನ್ನು ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ ಇಂಡೆಂಟ್‌ ನಿಗದಿಪಡಿಸಿರುವ ಪ್ರಮಾಣದಷ್ಟು ಮೆಕ್ಕೆಜೋಳ ಖರೀದಿಗೆ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು.

– 2023-24 ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ ರೂ.25 ಕೋಟಿಯಂತೆ ಒಟ್ಟು ರೂ. 3,510 ಕೋಟಿ ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು.

ಇದರಲ್ಲಿ ಈಗಾಗಲೇ ರೂ. 2,040 ಕೋಟಿ ಮೊತ್ತದಲ್ಲಿ ಶೇ.58ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ರೂ.920 ಕೋಟಿ ವೆಚ್ಚ ಭರಿಸಲಾಗಿದೆ.

ಇನ್ನೂ ರೂ. 1,205 ಕೋಟಿ ಬಿಡುಗಡೆ ಮಾಡಲು ಬೆಳಗಾವಿ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಆದೇಶ ನೀಡಲಾಗಿದೆ.

ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು.

– 2024-25ರಲ್ಲಿ ಮಳೆ ಹಾನಿಯಿಂದ ಉಂಟಾದ ರಸ್ತೆ ದುರಸ್ತಿಗಾಗಿ ರೂ.1,890 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, ರೂ.250 ಕೋಟಿ ಬಿಡುಗಡೆ ಮಾಡಲಾಗಿದೆ.

– ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ ರೂ. 8,666.50 ಕೋಟಿ ಅನುಮೋದನೆ ನೀಡಲಾಗಿದ್ದು, ಈಗಾಗಲೇ ರೂ.1 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ.

– ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ, ಅನುದಾನ ಪಾವತಿಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ.

ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮಾಡಬೇಕು.

– 2024-25 ನೇ ಸಾಲಿನಲ್ಲಿ 205 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಒಟ್ಟು ರೂ. 8,666.50 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.

ಇನ್ನು ಬಾಕಿಯಿರುವ 19 ಕ್ಷೇತ್ರಗಳಿಂದ ಪ್ರಸ್ತಾವನೆಗಳನ್ನು ಪಡೆದ ಬಳಿಕ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಟೆಂಡರ್‌ ಪ್ರಕ್ರಿಯೆಗಳನ್ನು ಜನವರಿ 10ರೊಳಗಾಗಿ ಪೂರ್ಣಗೊಳಿಸಬೇಕು.

– ರೈಲ್ವೇ ಕಾಮಗಾರಿಗಳಿಗೆ ಬಾಕಿಯಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು.

ಕುಡಚಿ-ಬಾಗಲಕೋಟೆ, ತುಮಕೂರು-ದಾವಣಗೆರೆ, ಬೇಲೂರು-ಹಾಸನ, ಶಿವಮೊಗ್ಗ-ರಾಣೆಬೆನ್ನೂರು, ಧಾರವಾಡ-ಬೆಳಗಾವಿ ರೈಲ್ವೇ ಮಾರ್ಗಗಳ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯೊಳಗಾಗಿ ಕೈಗೊಳ್ಳಲು ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಿಳಿಸಿದರು..

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

2 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

3 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

12 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago