ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಡಿಸೆಂಬರ್ 15 ರಿಂದ ನೋಂದಣಿ: ಜಿಲ್ಲೆಯಲ್ಲಿ 5 ಸಂಗ್ರಹಣಾ ಕೇಂದ್ರಗಳ ಸ್ಥಾಪನೆ -ಜಿಲ್ಲಾಧಿಕಾರಿ ಆರ್.ಲತಾ


ಕೇಂದ್ರ ಸರ್ಕಾರವು 2022-23 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ 3,578 ರೂ. ದರದಲ್ಲಿ ರಾಗಿ ಖರೀದಿಸಲು ಆದೇಶಿಸಿದೆ.

ಜಿಲ್ಲೆಯಲ್ಲಿ ಡಿಸೆಂಬರ್ 15 ರಿಂದ ರಾಗಿ ಖರೀದಿಗೆ ಸಂಬಧಿಸಿದಂತೆ ರೈತರ ನೋಂದಣಿ ಕಾರ್ಯ ಪ್ರಾರಂಭವಾಗಲಿದೆ. ಜನವರಿ 1 ರಿಂದ ಜಿಲ್ಲೆಯ ಐದು ಸ್ಥಳಗಳಲ್ಲಿ ರಾಗಿ ಸಂಗ್ರಹಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕುರಿತ ಕಾರ್ಯಪಡೆಯ ಮೊದಲನೇ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ರಾಜ್ಯದಾದ್ಯಂತ 5 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಲು ಗುರಿ ನಿಗದಿಗೊಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ ಮತ್ತು ಹೊಸಕೋಟೆ ತಾಲ್ಲೂಕುಗಳಲ್ಲಿ ತಲಾ ಒಂದು ಹಾಗೂ ದೊಡ್ಡಬಳ್ಳಾಪುರದ ಸಾಸಲು ಹೋಬಳಿಯಲ್ಲಿ ಒಂದು ಹೆಚ್ಚುವರಿ ಸಂಗ್ರಹಣಾ ಕೇಂದ್ರ ಸೇರಿ ಒಟ್ಟು 5 ರಾಗಿ ಸಂಗ್ರಹಣಾ ಕೇಂದ್ರಗಳನ್ನು ತೆರೆಯಲಾಗುವುದು. ಅಗತ್ಯ ಬಿದ್ದರೆ ಖರೀದಿ ಕೇಂದ್ರಗಳ ಸಂಖ್ಯೆ ಹೆಚ್ಚಿಸಲಾಗುವುದು. ಪ್ರತಿ ಕೇಂದ್ರಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಭದ್ರತೆ ಒದಗಿಸಲು ತಿಳಿಸಿದರು.

ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್‌ನಂತೆ ಗರಿಷ್ಟ 20 ಕ್ವಿಂಟಾಲ್ ರಾಗಿ ಖರೀದಿಸಲಾಗುವುದು. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ (ಕೆಎಫ್‌ಸಿಎಸ್‌ಸಿ ಬೆಂಗಳೂರು (ದಕ್ಷಿಣ) ಸಂಸ್ಥೆಯನ್ನು ಖರೀದಿ ಏಜೆನ್ಸಿಯಾಗಿ ನೇಮಕ ಮಾಡಲಾಗಿದೆ.

ಡಿಸೆಂಬರ್ 15 ರಿಂದ ರಾಗಿ ಖರೀದಿಗೆ ರೈತರ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. 2023 ರ ಜನೆವರಿ 1 ರಿಂದ ಮಾರ್ಚ್ 31 ರವರೆಗೆ ಖರೀದಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು ಖರೀದಿ ಕೇಂದ್ರಗಳ ಸ್ಥಾಪನೆ, ರೈತರ ನೋಂದಣಿಗೆ ಸಿದ್ಧತೆ ಮಾಡಿಕೊಳ್ಳಬೇಕು.

ಕರಪತ್ರಗಳ ವಿತರಣೆ, ರೈತಸಂಪರ್ಕ ಕೇಂದ್ರ, ಗ್ರಾಮ ಪಂಚಾಯಿತಿ ಸೇರಿದಂತೆ ರೈತರು ಸೇರುವ ಮೊದಲಾದ ಸ್ಥಳಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿ ಕೃಷಿಕರಿಗೆ ಮಾಹಿತಿ ನೀಡಬೇಕು. ರಾಗಿ ಸಂಗ್ರಹಣೆಗೆ ಜಿಲ್ಲೆಯ ಉಗ್ರಾಣಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ (ಕೆಎಫ್‌ಸಿಎಸ್‌ಸಿ ಬೆಂಗಳೂರು (ದಕ್ಷಿಣ) ವ್ಯವಸ್ಥಾಪಕ ರಾಘವೇಂದ್ರ ಮಾತನಾಡಿ, ರೈತರಿಂದ ಬರುವ ರಾಗಿಯನ್ನು ಕೆಎಫ್‌ಸಿಎಸ್‌ಸಿ ವತಿಯಿಂದ ಉಚಿತವಾಗಿ ನೀಡಲಾಗುವ ಗೋಣಿ ಚೀಲದಲ್ಲಿ ತುಂಬಿಕೊಳ್ಳಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಗಿರಿಜಾದೇವಿ.ಜಿ ಹಾಗೂ ಮತ್ತಿತರರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago