ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಡಿಸೆಂಬರ್ 15 ರಿಂದ ನೋಂದಣಿ: ಜಿಲ್ಲೆಯಲ್ಲಿ 5 ಸಂಗ್ರಹಣಾ ಕೇಂದ್ರಗಳ ಸ್ಥಾಪನೆ -ಜಿಲ್ಲಾಧಿಕಾರಿ ಆರ್.ಲತಾ


ಕೇಂದ್ರ ಸರ್ಕಾರವು 2022-23 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ 3,578 ರೂ. ದರದಲ್ಲಿ ರಾಗಿ ಖರೀದಿಸಲು ಆದೇಶಿಸಿದೆ.

ಜಿಲ್ಲೆಯಲ್ಲಿ ಡಿಸೆಂಬರ್ 15 ರಿಂದ ರಾಗಿ ಖರೀದಿಗೆ ಸಂಬಧಿಸಿದಂತೆ ರೈತರ ನೋಂದಣಿ ಕಾರ್ಯ ಪ್ರಾರಂಭವಾಗಲಿದೆ. ಜನವರಿ 1 ರಿಂದ ಜಿಲ್ಲೆಯ ಐದು ಸ್ಥಳಗಳಲ್ಲಿ ರಾಗಿ ಸಂಗ್ರಹಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕುರಿತ ಕಾರ್ಯಪಡೆಯ ಮೊದಲನೇ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ರಾಜ್ಯದಾದ್ಯಂತ 5 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಲು ಗುರಿ ನಿಗದಿಗೊಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ ಮತ್ತು ಹೊಸಕೋಟೆ ತಾಲ್ಲೂಕುಗಳಲ್ಲಿ ತಲಾ ಒಂದು ಹಾಗೂ ದೊಡ್ಡಬಳ್ಳಾಪುರದ ಸಾಸಲು ಹೋಬಳಿಯಲ್ಲಿ ಒಂದು ಹೆಚ್ಚುವರಿ ಸಂಗ್ರಹಣಾ ಕೇಂದ್ರ ಸೇರಿ ಒಟ್ಟು 5 ರಾಗಿ ಸಂಗ್ರಹಣಾ ಕೇಂದ್ರಗಳನ್ನು ತೆರೆಯಲಾಗುವುದು. ಅಗತ್ಯ ಬಿದ್ದರೆ ಖರೀದಿ ಕೇಂದ್ರಗಳ ಸಂಖ್ಯೆ ಹೆಚ್ಚಿಸಲಾಗುವುದು. ಪ್ರತಿ ಕೇಂದ್ರಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಭದ್ರತೆ ಒದಗಿಸಲು ತಿಳಿಸಿದರು.

ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್‌ನಂತೆ ಗರಿಷ್ಟ 20 ಕ್ವಿಂಟಾಲ್ ರಾಗಿ ಖರೀದಿಸಲಾಗುವುದು. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ (ಕೆಎಫ್‌ಸಿಎಸ್‌ಸಿ ಬೆಂಗಳೂರು (ದಕ್ಷಿಣ) ಸಂಸ್ಥೆಯನ್ನು ಖರೀದಿ ಏಜೆನ್ಸಿಯಾಗಿ ನೇಮಕ ಮಾಡಲಾಗಿದೆ.

ಡಿಸೆಂಬರ್ 15 ರಿಂದ ರಾಗಿ ಖರೀದಿಗೆ ರೈತರ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. 2023 ರ ಜನೆವರಿ 1 ರಿಂದ ಮಾರ್ಚ್ 31 ರವರೆಗೆ ಖರೀದಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು ಖರೀದಿ ಕೇಂದ್ರಗಳ ಸ್ಥಾಪನೆ, ರೈತರ ನೋಂದಣಿಗೆ ಸಿದ್ಧತೆ ಮಾಡಿಕೊಳ್ಳಬೇಕು.

ಕರಪತ್ರಗಳ ವಿತರಣೆ, ರೈತಸಂಪರ್ಕ ಕೇಂದ್ರ, ಗ್ರಾಮ ಪಂಚಾಯಿತಿ ಸೇರಿದಂತೆ ರೈತರು ಸೇರುವ ಮೊದಲಾದ ಸ್ಥಳಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿ ಕೃಷಿಕರಿಗೆ ಮಾಹಿತಿ ನೀಡಬೇಕು. ರಾಗಿ ಸಂಗ್ರಹಣೆಗೆ ಜಿಲ್ಲೆಯ ಉಗ್ರಾಣಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ (ಕೆಎಫ್‌ಸಿಎಸ್‌ಸಿ ಬೆಂಗಳೂರು (ದಕ್ಷಿಣ) ವ್ಯವಸ್ಥಾಪಕ ರಾಘವೇಂದ್ರ ಮಾತನಾಡಿ, ರೈತರಿಂದ ಬರುವ ರಾಗಿಯನ್ನು ಕೆಎಫ್‌ಸಿಎಸ್‌ಸಿ ವತಿಯಿಂದ ಉಚಿತವಾಗಿ ನೀಡಲಾಗುವ ಗೋಣಿ ಚೀಲದಲ್ಲಿ ತುಂಬಿಕೊಳ್ಳಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಗಿರಿಜಾದೇವಿ.ಜಿ ಹಾಗೂ ಮತ್ತಿತರರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

4 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

15 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

16 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

16 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

18 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

21 hours ago