ಕನಿಷ್ಠ ಬೆಂಬಲ ಬೆಲೆ ಯೋಜನೆ: ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟ ಕಾಪಾಡಿ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸೂಚನೆ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟವನ್ನು ಕಾಪಾಡಬೇಕು ಲೋಪವೆಸಗಿದ್ದಲ್ಲಿ ಅಧಿಕಾರಿಗಳ ವಿರುದ್ದ ಕಠಣಕ್ರಮ ತೆಗೆದುಕೊಳ್ಳಲಾಗುವುದು  ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಸೂಚಿಸಿದರು.

ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನ್ಸಿ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿದರು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ(MSP) ರೈತರಿಂದ ಖರೀದಿಸುವ ರಾಗಿ ,ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ MSPಯ ಅಧ್ಯಕ್ಷರಿದ್ದು, ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅವರ ಮೇಲೆ ಕ್ರಮ ತೆಗೆದುಕೊಳ್ಳುಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿ ಕ್ವಿಂಟಾಲ್ ರಾಗಿಗೆ 4,290 ರೂ.ಗಳನ್ನು ಹಾಗೂ ಜೋಳ ಪ್ರತಿ ಕ್ವಿಂಟಾಲ್ ಹೈಬ್ರೀಡ್ ಜೋಳ 3,371
ಹಾಗೂ ಮಾಲದಂಡಿ ಜೋಳ 3,421
ಭತ್ತಕ್ಕೆ ಸಾಮಾನ್ಯವಾಗಿ ಪ್ರತಿ ಕ್ವಿಂಟಾಲ್ 2,300, ಗ್ರೇಡ್ ಎ 2,320 ದರ ನಿಗದಿಯಾಗಿದ್ದು, ಈ ಧರದಲ್ಲಿ ರೈತರಿಂದ ಖರೀದಿಸಿ ಅವರಿಗೆ ಸರಿಯಾದ ಸಮಯಕ್ಕೆ ಹಣ ಸಂದಾಯ ಮಾಡಬೇಕು ಎಂದರು.

ಜಿಲ್ಲಾಧಿಕಾರಿಗಳು ಖರೀದೀ ಕೇಂದ್ರಗಳ ಸ್ಥಳಗಳಲ್ಲಿ ರೈತರಿಗೆ ಕುಡಿಯುವ ನೀರು ಹಾಗೂ ಶಾಮಿಯಾನದ ವ್ಯವಸ್ಥೆಯನ್ನು ಕಲ್ಲಿಸಬೇಕು. ಏಕೆಂದರೆ ಮಾರ್ಚ್ ತಿಂಗಳಲ್ಲಿ ಹೆಚ್ಚಿನ ಬಿಸಿಲಿರಿವುದರಿಂದ ರೈತರಿಗೆ ಅನುಕೂಲಕರವಾದ ವಾತಾವರಣ ನಿರ್ಮಿಸಬೇಕು ಎಂದರು.

ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ 15 ಕೆಜಿ‌ ಅಕ್ಕಿ ವಿತರಿಸಲು ತೀರ್ಮಾನಿಸಿದ್ದು ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.

ಜಿಲ್ಲಾಧಿಕಾರಿಗಳೇ ನೇರವಾಗಿ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ಮಾಡಬೇಕು. ರಾಗಿಯನ್ನು ಖರೀದಿಸುವ ಕೇಂದ್ರಗಳಲ್ಲಿ ತೂಕದಲ್ಲಿ ವ್ಯತ್ಯಾಸಗಳು ಕಾಣದಂತೆ ನಿಗಾವಹಿಸಬೇಕು. ಲೋಪವೆಸಗಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅಮಾನತು ಮಾಡಬೇಕು ಎಂದು ಜಿಲ್ಲಾಧಿಕಾರಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್, ಆಯುಕ್ತ ವಾಸಿ ರೆಡ್ಡಿ ವಿಜಯಜೋತ್ನಾ, ನಿಗಮ ನಿರ್ದೇಶಕ ಚಂದ್ರಕಾತ್, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರಾದ ಎಂ ಎಸ್ ಎನ್ ಬಾಬು. ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

30 minutes ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

5 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago