ಕನ್ನಡವನ್ನ ನಿರ್ಲಕ್ಷಿಸಿದರೆ ಸಹಿಸಲ್ಲ- ಎಲ್ಲರು ಕನ್ನಡಕ್ಕೆ ಗೌರವ ನೀಡಲೇ ಬೇಕು- ಕರವೇ (ಟಿ.ಎ ನಾರಾಯಣಗೌಡರ ಬಣ)

ನಗರದ ಖಾಸಗಿ ಒಡೆತನದ ಸವೆನ್ ಹಿಲ್ಸ್ ಆಸ್ಪತ್ರೆ ತನ್ನ ನಾಮಫಲಕದಲ್ಲಿ ಇಂಗ್ಲಿಷ್ ಬಳಕೆ ಮಾಡಿದ‌ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ ನಾರಾಯಣಗೌಡರ ಬಣ)ದ ವತಿಯಿಂದ ಆಸ್ಪತ್ರೆ ಮುಂಭಾಗ ಪ್ರತಿಭಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕರವೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಮಾತನಾಡಿ, ಈಗಾಗಲೇ ಹಲವು ಬಾರಿ ಎಚ್ಚರಿಕೆ ನೀಡಿದ್ದರು ಸಹ ಆಸ್ಪತ್ರೆ ಸಿಬ್ಬಂದಿ ಯಾವುದೇ ಕ್ರಮ ಕೈಗೊಂಡಿಲ್ಲ, ಕನ್ನಡಕ್ಕೆ ಅವಮಾನಿಸಿದವರ ವಿರುದ್ಧ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡರ ಬಣ ಸದಾ ತೊಡೆತಟ್ಟುತ್ತದೆ. ಅಲ್ಲದೆ ಸ್ಥಳೀಯವಾಗಿ ಸಣ್ಣ ಸಮಸ್ಯೆ ಆದರೂ ಬಂದು ನಿಲ್ಲುವ ಹಲವು ಮುಖಂಡರು ಕನ್ನಡಕ್ಕೆ ಸಮಸ್ಯೆ ಆದಾಗ ಬರುವುದಿಲ್ಲ ಏಕೆ ಎಂಬ ಪ್ರಶ್ನೆ ನಮ್ಮಲ್ಲಿ ಕಾಡುತ್ತಿದೆ. ಇದು ಕೇವಲ ಸಾಂಕೇತಿಕ ಹೋರಾಟ, ಆಸ್ಪತ್ರೆ ಸಿಬ್ಬಂದಿ ನಾಮಫಲಕ ಬದಲಿಸದೇ ಇದ್ದಲ್ಲಿ ಮುಂದೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಆಸ್ಪತ್ರೆ ಮಾಲೀಕರೊಂದಿಗೆ ಮಾತನಾಡಿದ ಪ್ರತಿಭಟನಾಕಾರರು ಕೂಡಲೇ ನಾಮಫಲಕದ ಬೆಳಕನ್ನು ಬಂದ್ ಮಾಡುವಂತೆ ಆಗ್ರಹಿಸಿದರು, ಒತ್ತಾಯಕ್ಕೆ ಮಣಿದ ಆಸ್ಪತ್ರೆ ಸಿಬ್ಬಂದಿ ಕೂಡಲೇ ಲೈಟ್ ಆಫ್ ಮಾಡುವ ಮೂಲಕ ಹೋರಾಟಗಾರರಿಗೆ ಸ್ಪಂದಿಸಿದ್ದಾರೆ ಹಾಗೂ ಆಸ್ಪತ್ರೆ ನಾಮಪಲಕವನ್ನು ಕನ್ನಡದಲ್ಲಿ ಬದಲಿಸುವುದಾಗಿ ತಿಳಿಸಿದ್ದಾರೆ.

ಸ್ಥಳೀಯವಾಗಿ ಕನ್ನಡ ಭಾಷೆಗೆ ಸಣ್ಣಪುಟ್ಟ ಅಪಮಾನ ಅವಮಾನಗಳಾದ ತಕ್ಷಣವೇ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ರ ಬಣ ) ಸ್ಥಳಕ್ಕೆ ಧಾವಿಸಿ ಹೋರಾಟ ಅಥವಾ ಪ್ರತಿಭಟನೆ ಮಾಡುವ ಮೂಲಕ ಕನ್ನಡ ಭಾಷೆಯನ್ನು ಉಳಿಸುವ ಬೆಳೆಸುವ ಉತ್ತಮ ಕಾರ್ಯವನ್ನು ಮಾಡುತ್ತಿದೆ. ನಾಡು ನುಡಿ ಜಲದ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯ ಬದ್ಧತೆ ಮೆಚ್ಚುವಂಥದ್ದು ಎಂಬ ಮಾತುಗಳು ಸಾಮಾಜಿಕ ವಲಯದಲ್ಲಿ ಕೇಳಿ ಬರುತ್ತಿದ್ದು, ಕನ್ನಡ ಪರ ಕಾರ್ಯಗಳು ಮತ್ತಷ್ಟು ಹೆಚ್ಚಾಗಲಿ ಎಂಬುದೇ ನಮ್ಮ ಆಶಯ ಕೂಡ..

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

4 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

10 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

11 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

23 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

23 hours ago