ನಗರದ ಖಾಸಗಿ ಒಡೆತನದ ಸವೆನ್ ಹಿಲ್ಸ್ ಆಸ್ಪತ್ರೆ ತನ್ನ ನಾಮಫಲಕದಲ್ಲಿ ಇಂಗ್ಲಿಷ್ ಬಳಕೆ ಮಾಡಿದ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ ನಾರಾಯಣಗೌಡರ ಬಣ)ದ ವತಿಯಿಂದ ಆಸ್ಪತ್ರೆ ಮುಂಭಾಗ ಪ್ರತಿಭಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕರವೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಮಾತನಾಡಿ, ಈಗಾಗಲೇ ಹಲವು ಬಾರಿ ಎಚ್ಚರಿಕೆ ನೀಡಿದ್ದರು ಸಹ ಆಸ್ಪತ್ರೆ ಸಿಬ್ಬಂದಿ ಯಾವುದೇ ಕ್ರಮ ಕೈಗೊಂಡಿಲ್ಲ, ಕನ್ನಡಕ್ಕೆ ಅವಮಾನಿಸಿದವರ ವಿರುದ್ಧ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡರ ಬಣ ಸದಾ ತೊಡೆತಟ್ಟುತ್ತದೆ. ಅಲ್ಲದೆ ಸ್ಥಳೀಯವಾಗಿ ಸಣ್ಣ ಸಮಸ್ಯೆ ಆದರೂ ಬಂದು ನಿಲ್ಲುವ ಹಲವು ಮುಖಂಡರು ಕನ್ನಡಕ್ಕೆ ಸಮಸ್ಯೆ ಆದಾಗ ಬರುವುದಿಲ್ಲ ಏಕೆ ಎಂಬ ಪ್ರಶ್ನೆ ನಮ್ಮಲ್ಲಿ ಕಾಡುತ್ತಿದೆ. ಇದು ಕೇವಲ ಸಾಂಕೇತಿಕ ಹೋರಾಟ, ಆಸ್ಪತ್ರೆ ಸಿಬ್ಬಂದಿ ನಾಮಫಲಕ ಬದಲಿಸದೇ ಇದ್ದಲ್ಲಿ ಮುಂದೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಆಸ್ಪತ್ರೆ ಮಾಲೀಕರೊಂದಿಗೆ ಮಾತನಾಡಿದ ಪ್ರತಿಭಟನಾಕಾರರು ಕೂಡಲೇ ನಾಮಫಲಕದ ಬೆಳಕನ್ನು ಬಂದ್ ಮಾಡುವಂತೆ ಆಗ್ರಹಿಸಿದರು, ಒತ್ತಾಯಕ್ಕೆ ಮಣಿದ ಆಸ್ಪತ್ರೆ ಸಿಬ್ಬಂದಿ ಕೂಡಲೇ ಲೈಟ್ ಆಫ್ ಮಾಡುವ ಮೂಲಕ ಹೋರಾಟಗಾರರಿಗೆ ಸ್ಪಂದಿಸಿದ್ದಾರೆ ಹಾಗೂ ಆಸ್ಪತ್ರೆ ನಾಮಪಲಕವನ್ನು ಕನ್ನಡದಲ್ಲಿ ಬದಲಿಸುವುದಾಗಿ ತಿಳಿಸಿದ್ದಾರೆ.
ಸ್ಥಳೀಯವಾಗಿ ಕನ್ನಡ ಭಾಷೆಗೆ ಸಣ್ಣಪುಟ್ಟ ಅಪಮಾನ ಅವಮಾನಗಳಾದ ತಕ್ಷಣವೇ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ರ ಬಣ ) ಸ್ಥಳಕ್ಕೆ ಧಾವಿಸಿ ಹೋರಾಟ ಅಥವಾ ಪ್ರತಿಭಟನೆ ಮಾಡುವ ಮೂಲಕ ಕನ್ನಡ ಭಾಷೆಯನ್ನು ಉಳಿಸುವ ಬೆಳೆಸುವ ಉತ್ತಮ ಕಾರ್ಯವನ್ನು ಮಾಡುತ್ತಿದೆ. ನಾಡು ನುಡಿ ಜಲದ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯ ಬದ್ಧತೆ ಮೆಚ್ಚುವಂಥದ್ದು ಎಂಬ ಮಾತುಗಳು ಸಾಮಾಜಿಕ ವಲಯದಲ್ಲಿ ಕೇಳಿ ಬರುತ್ತಿದ್ದು, ಕನ್ನಡ ಪರ ಕಾರ್ಯಗಳು ಮತ್ತಷ್ಟು ಹೆಚ್ಚಾಗಲಿ ಎಂಬುದೇ ನಮ್ಮ ಆಶಯ ಕೂಡ..
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…