ಕನ್ನಡದ ಖ್ಯಾತ ಕತೆಗಾರ, ಕವಿ, ವಿಮರ್ಶಕ ಕೆ.ವಿ. ತಿರುಮಲೇಶ್ ಅವರಿಗೆ ನುಡಿ ನಮನ

ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ತಿರುಮಲೇಶ್ ಇವರು ಕನ್ನಡ ಭಾಷೆಯ ಬಹು ಮುಖ್ಯ ಕವಿ, ಕಥೆಗಾರ, ಭಾಷಾ ವಿಜ್ಞಾನಿ, ವಿದ್ವಾಂಸ ಹಾಗೂ ವಿಮರ್ಶಕರಾಗಿ ಗುರುತಿಸಿಕೊಂಡಿದ್ದರು ಎಂದು ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಹೇಳಿದರು.

ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ
ನುಡಿ ನಮನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೆ.ವಿ. ತಿರುಮಲೇಶ್ ಕನ್ನಡದ ನವ್ಯ ಸಾಹಿತ್ಯದ ಸಂದರ್ಭದಲ್ಲಿ ಬರೆಯಲು ಪ್ರಾರಂಭ ಮಾಡಿದ ಅವರು, ಸುಮಾರು ಐದು ದಶಕಗಳ ಕಾಲ ಕವಿತೆ, ಕಥೆ, ವಿಮರ್ಶೆ ಅನುವಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ‘ಮುಖವಾಡಗಳು’ ಹಾಗೂ ‘ವಠಾರ’ ಎಂಬ ಎರಡು ಜನಪ್ರಿಯ ಕೃತಿಗಳನ್ನು ರಚಿಸಿದ್ದಾರೆ. ಇವರ 20 ಪ್ರಕಟಿತ ಕೃತಿಗಳಲ್ಲಿ ಅವಧ, ವಠಾರ, ಮುಖವಾಡಗಳು, ಪಾಪಿಯೂ ಮುಖ್ಯ ಕವನ ಸಂಕಲನಗಳಾಗಿವೆ. ಆರೋಪ, ಮುಸುಗು ಇವರ ಕೆಲ ಕಾದಂಬರಿಗಳು. ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಅಸ್ತಿತ್ವವಾದ ಇವು ಇವರ ಮುಖ್ಯ ವಿಮರ್ಶಾ ಕೃತಿಗಳು. ತಿರುಮಲೇಶರು ಪ್ರಸ್ತುತ ಅಮೇರಿಕದ ಅಯೋವ ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ, ಪ್ರಾಧ್ಯಾಪಕರಾದ , ನಂದನ, ಕಛೇರಿಯ ಅಧೀಕ್ಷಕರಾದ ಶ್ರೀನಿವಾಸ್, ಗ್ರಂಥಪಾಲಕರಾದ ಪ್ರೇಮ, ಗಂಗರಾಜು, ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

9 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

10 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

10 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

12 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

14 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

14 hours ago