ಕನ್ನಡದ ಖ್ಯಾತ ಕತೆಗಾರ, ಕವಿ, ವಿಮರ್ಶಕ ಕೆ.ವಿ. ತಿರುಮಲೇಶ್ ಅವರಿಗೆ ನುಡಿ ನಮನ

ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ತಿರುಮಲೇಶ್ ಇವರು ಕನ್ನಡ ಭಾಷೆಯ ಬಹು ಮುಖ್ಯ ಕವಿ, ಕಥೆಗಾರ, ಭಾಷಾ ವಿಜ್ಞಾನಿ, ವಿದ್ವಾಂಸ ಹಾಗೂ ವಿಮರ್ಶಕರಾಗಿ ಗುರುತಿಸಿಕೊಂಡಿದ್ದರು ಎಂದು ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಹೇಳಿದರು.

ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ
ನುಡಿ ನಮನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೆ.ವಿ. ತಿರುಮಲೇಶ್ ಕನ್ನಡದ ನವ್ಯ ಸಾಹಿತ್ಯದ ಸಂದರ್ಭದಲ್ಲಿ ಬರೆಯಲು ಪ್ರಾರಂಭ ಮಾಡಿದ ಅವರು, ಸುಮಾರು ಐದು ದಶಕಗಳ ಕಾಲ ಕವಿತೆ, ಕಥೆ, ವಿಮರ್ಶೆ ಅನುವಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ‘ಮುಖವಾಡಗಳು’ ಹಾಗೂ ‘ವಠಾರ’ ಎಂಬ ಎರಡು ಜನಪ್ರಿಯ ಕೃತಿಗಳನ್ನು ರಚಿಸಿದ್ದಾರೆ. ಇವರ 20 ಪ್ರಕಟಿತ ಕೃತಿಗಳಲ್ಲಿ ಅವಧ, ವಠಾರ, ಮುಖವಾಡಗಳು, ಪಾಪಿಯೂ ಮುಖ್ಯ ಕವನ ಸಂಕಲನಗಳಾಗಿವೆ. ಆರೋಪ, ಮುಸುಗು ಇವರ ಕೆಲ ಕಾದಂಬರಿಗಳು. ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಅಸ್ತಿತ್ವವಾದ ಇವು ಇವರ ಮುಖ್ಯ ವಿಮರ್ಶಾ ಕೃತಿಗಳು. ತಿರುಮಲೇಶರು ಪ್ರಸ್ತುತ ಅಮೇರಿಕದ ಅಯೋವ ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ, ಪ್ರಾಧ್ಯಾಪಕರಾದ , ನಂದನ, ಕಛೇರಿಯ ಅಧೀಕ್ಷಕರಾದ ಶ್ರೀನಿವಾಸ್, ಗ್ರಂಥಪಾಲಕರಾದ ಪ್ರೇಮ, ಗಂಗರಾಜು, ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

2 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

14 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

14 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

15 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

18 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago