ಕನ್ನಡಪರ ಸಂಘಟನೆ ಹಾಗೂ ಹೋರಾಟಕ್ಕೆ ಎಲ್ಲರ ಬೆಂಬಲ ಅಗತ್ಯ- ಶಾಸಕ ಧೀರಜ್ ಮುನಿರಾಜ್

ಕನ್ನಡ ನಾಡು ನುಡಿ ಉಳಿವಿಗಾಗಿ ನಡೆಯುವ ಪ್ರತಿಯೊಂದು ಹೊರಾಟಕ್ಕೂ ಕನ್ನಡಿಗರಾಗಿ ನಮ್ಮ ಬೆಂಬಲ ಸದಾ ಇರಬೇಕು. ಆಡಳಿತ ವಿಚಾರದಲ್ಲೂ ಸಹ ಅಧಿಕಾರಿಗಳು ಕನ್ನಡ ಪರ ಹೋರಾಟಕ್ಕೆ ಬೆಂಬಲಕ್ಕೆ ನಿಲ್ಲಬೇಕೆಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರದ ಡಾ.ರಾಜಕುಮರ್ ಕಲಾಮಂದಿರದಲ್ಲಿ ತಾಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಭಾಗವಹಿಸಿ ಅವರು ಮಾತನಾಡಿದರು.

ಕರ್ನಾಟಕ ಏಕೀಕರಣಗೊಂಡ ದಿನ. ಇದು ಕನ್ನಡಿಗರಾದ ನಮ್ಮೆಲ್ಲರಿಗೂ ಬಹಳ ವಿಶೇಷವಾದ ದಿನ. ಕನ್ನಡದ ಕಾರಣಕ್ಕೆ ಒಗ್ಗೂಡಿರುವ ಜನ ನಾವು. ಸ್ವಾತಂತ್ರ‍್ಯ ಪೂರ್ವದಲ್ಲಿ ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರ ಹಲವು ಪ್ರದೇಶಗಳನ್ನು ಒಂದುಗೂಡಿಸಿ, 1956ರ ನವೆಂಬರ್ 1ರಂದು ಕರ್ನಾಟಕ ಏಕೀಕರಣ ಮಾಡಲಾಯಿತು. ಅಂದಿನಿಂದ ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವನ್ನು ಆಚರಿಸಿಕೊಂಡು ಬಂದಿದ್ದೇವೆ ಎಂದು ತಿಳಿಸಿದರು.

ಕ್ರಿ.ಶ.450ರ ಕನ್ನಡ ಭಾಷೆಯ ಮೊಟ್ಟ ಮೊದಲ ಹಲ್ಮಿಡಿ ಶಾಸನದಲ್ಲಿ ಕನ್ನಡದ ಪದಗಳಿವೆ. ಕ್ರಿ.ಶ. 850 ರ ಕನ್ನಡದ ಮೊಟ್ಟ ಮೊದಲ ಗ್ರಂಥ ಕವಿರಾಜ ಮಾರ್ಗದಲ್ಲಿ ಕನ್ನಡ ನಾಡಿನ ವಿಸ್ತಾರದ ಬಗ್ಗೆ ಉಲ್ಲೇಖವಿದೆ. 21ನೇ ಶತಮಾನದ ಈ ಹೊತ್ತಿನಲ್ಲಿ ಕನ್ನಡ ಭಾಷೆ ಆಧುನಿಕತೆಯೊಂದಿಗೆ ತನ್ನದೇ ಅಸ್ಮಿತೆಯನ್ನು ಉಳಿಸಿಕೊಂಡಿದೆ. ಈ ಮಣ್ಣಿಗೊಂದು, ಈ ನುಡಿಗೊಂದು ಸೊಗಸಿದೆ, ಸೌಂದರ್ಯವಿದೆ, ಬೆಡಗಿದೆ. ಆದ್ದರಿಂದ, ಪ್ರಾದೇಶಿಕ ಸಂಸ್ಕೃತಿಯನ್ನು ಎತ್ತಿಹಿಡಿಯುವ ಕಾರ್ಯವನ್ನು ನಾವು ಮಾಡಬೇಕಿದೆ ಎಂದರು.

ಇ‌ಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಆ ಮಹಾನ್ ಚೇತನಗಳನ್ನೆಲ್ಲಾ ಇಂದು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದರು.

ಮಾಧ್ಯಮ ಕ್ಷೇತ್ರದಲ್ಲಿ ಗಂಗರಾಜು, ಯಕ್ಷಗಾನ ಕ್ಷೇತ್ರದಲ್ಲಿ  ದೀಕ್ಷಾ ಕಂಠಿ, ರಂಗಭೂಮಿ ಕ್ಷೇತ್ರದಲ್ಲಿ ಎಂ.ಜಿ ರಾಮಚಂದ್ರ, ಸಮಾಜ ಸೇವೆ ಕ್ಷೇತ್ರದಲ್ಲಿ ಅನ್ನಪೂರ್ಣ, ಕನ್ನಡಪರ ಹೋರಾಟಗಾರರಾದ ಸುರೇಶ್ ಸೇರಿದಂತೆ ಒಟ್ಟು 14 ಮಂದಿ ಗಣ್ಯರಿಗೆ ಸನ್ಮಾನಿಸಲಾಯಿತು.

ಈ ವೇಳೆ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆನಂದ್, ಉಪಾಧ್ಯಕ್ಷ ಮಲ್ಲೇಶ್, ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾ.ಪಂ ಇಒ ಮುನಿರಾಜು, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕನ್ನಡಪರ ಹೋರಾಟಗಾರರು, ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

1 day ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

2 days ago