ಕನ್ನಡ ನಾಡು ನುಡಿ ಉಳಿವಿಗಾಗಿ ನಡೆಯುವ ಪ್ರತಿಯೊಂದು ಹೊರಾಟಕ್ಕೂ ಕನ್ನಡಿಗರಾಗಿ ನಮ್ಮ ಬೆಂಬಲ ಸದಾ ಇರಬೇಕು. ಆಡಳಿತ ವಿಚಾರದಲ್ಲೂ ಸಹ ಅಧಿಕಾರಿಗಳು ಕನ್ನಡ ಪರ ಹೋರಾಟಕ್ಕೆ ಬೆಂಬಲಕ್ಕೆ ನಿಲ್ಲಬೇಕೆಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದ ಡಾ.ರಾಜಕುಮರ್ ಕಲಾಮಂದಿರದಲ್ಲಿ ತಾಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕರ್ನಾಟಕ ಏಕೀಕರಣಗೊಂಡ ದಿನ. ಇದು ಕನ್ನಡಿಗರಾದ ನಮ್ಮೆಲ್ಲರಿಗೂ ಬಹಳ ವಿಶೇಷವಾದ ದಿನ. ಕನ್ನಡದ ಕಾರಣಕ್ಕೆ ಒಗ್ಗೂಡಿರುವ ಜನ ನಾವು. ಸ್ವಾತಂತ್ರ್ಯ ಪೂರ್ವದಲ್ಲಿ ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರ ಹಲವು ಪ್ರದೇಶಗಳನ್ನು ಒಂದುಗೂಡಿಸಿ, 1956ರ ನವೆಂಬರ್ 1ರಂದು ಕರ್ನಾಟಕ ಏಕೀಕರಣ ಮಾಡಲಾಯಿತು. ಅಂದಿನಿಂದ ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವನ್ನು ಆಚರಿಸಿಕೊಂಡು ಬಂದಿದ್ದೇವೆ ಎಂದು ತಿಳಿಸಿದರು.
ಇಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಆ ಮಹಾನ್ ಚೇತನಗಳನ್ನೆಲ್ಲಾ ಇಂದು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದರು.
ಈ ವೇಳೆ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆನಂದ್, ಉಪಾಧ್ಯಕ್ಷ ಮಲ್ಲೇಶ್, ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾ.ಪಂ ಇಒ ಮುನಿರಾಜು, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕನ್ನಡಪರ ಹೋರಾಟಗಾರರು, ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…