ಕನ್ನಡಪರ ಸಂಘಟನೆ ಹಾಗೂ ಹೋರಾಟಕ್ಕೆ ಎಲ್ಲರ ಬೆಂಬಲ ಅಗತ್ಯ- ಶಾಸಕ ಧೀರಜ್ ಮುನಿರಾಜ್

ಕನ್ನಡ ನಾಡು ನುಡಿ ಉಳಿವಿಗಾಗಿ ನಡೆಯುವ ಪ್ರತಿಯೊಂದು ಹೊರಾಟಕ್ಕೂ ಕನ್ನಡಿಗರಾಗಿ ನಮ್ಮ ಬೆಂಬಲ ಸದಾ ಇರಬೇಕು. ಆಡಳಿತ ವಿಚಾರದಲ್ಲೂ ಸಹ ಅಧಿಕಾರಿಗಳು ಕನ್ನಡ ಪರ ಹೋರಾಟಕ್ಕೆ ಬೆಂಬಲಕ್ಕೆ ನಿಲ್ಲಬೇಕೆಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರದ ಡಾ.ರಾಜಕುಮರ್ ಕಲಾಮಂದಿರದಲ್ಲಿ ತಾಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಭಾಗವಹಿಸಿ ಅವರು ಮಾತನಾಡಿದರು.

ಕರ್ನಾಟಕ ಏಕೀಕರಣಗೊಂಡ ದಿನ. ಇದು ಕನ್ನಡಿಗರಾದ ನಮ್ಮೆಲ್ಲರಿಗೂ ಬಹಳ ವಿಶೇಷವಾದ ದಿನ. ಕನ್ನಡದ ಕಾರಣಕ್ಕೆ ಒಗ್ಗೂಡಿರುವ ಜನ ನಾವು. ಸ್ವಾತಂತ್ರ‍್ಯ ಪೂರ್ವದಲ್ಲಿ ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರ ಹಲವು ಪ್ರದೇಶಗಳನ್ನು ಒಂದುಗೂಡಿಸಿ, 1956ರ ನವೆಂಬರ್ 1ರಂದು ಕರ್ನಾಟಕ ಏಕೀಕರಣ ಮಾಡಲಾಯಿತು. ಅಂದಿನಿಂದ ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವನ್ನು ಆಚರಿಸಿಕೊಂಡು ಬಂದಿದ್ದೇವೆ ಎಂದು ತಿಳಿಸಿದರು.

ಕ್ರಿ.ಶ.450ರ ಕನ್ನಡ ಭಾಷೆಯ ಮೊಟ್ಟ ಮೊದಲ ಹಲ್ಮಿಡಿ ಶಾಸನದಲ್ಲಿ ಕನ್ನಡದ ಪದಗಳಿವೆ. ಕ್ರಿ.ಶ. 850 ರ ಕನ್ನಡದ ಮೊಟ್ಟ ಮೊದಲ ಗ್ರಂಥ ಕವಿರಾಜ ಮಾರ್ಗದಲ್ಲಿ ಕನ್ನಡ ನಾಡಿನ ವಿಸ್ತಾರದ ಬಗ್ಗೆ ಉಲ್ಲೇಖವಿದೆ. 21ನೇ ಶತಮಾನದ ಈ ಹೊತ್ತಿನಲ್ಲಿ ಕನ್ನಡ ಭಾಷೆ ಆಧುನಿಕತೆಯೊಂದಿಗೆ ತನ್ನದೇ ಅಸ್ಮಿತೆಯನ್ನು ಉಳಿಸಿಕೊಂಡಿದೆ. ಈ ಮಣ್ಣಿಗೊಂದು, ಈ ನುಡಿಗೊಂದು ಸೊಗಸಿದೆ, ಸೌಂದರ್ಯವಿದೆ, ಬೆಡಗಿದೆ. ಆದ್ದರಿಂದ, ಪ್ರಾದೇಶಿಕ ಸಂಸ್ಕೃತಿಯನ್ನು ಎತ್ತಿಹಿಡಿಯುವ ಕಾರ್ಯವನ್ನು ನಾವು ಮಾಡಬೇಕಿದೆ ಎಂದರು.

ಇ‌ಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಆ ಮಹಾನ್ ಚೇತನಗಳನ್ನೆಲ್ಲಾ ಇಂದು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದರು.

ಮಾಧ್ಯಮ ಕ್ಷೇತ್ರದಲ್ಲಿ ಗಂಗರಾಜು, ಯಕ್ಷಗಾನ ಕ್ಷೇತ್ರದಲ್ಲಿ  ದೀಕ್ಷಾ ಕಂಠಿ, ರಂಗಭೂಮಿ ಕ್ಷೇತ್ರದಲ್ಲಿ ಎಂ.ಜಿ ರಾಮಚಂದ್ರ, ಸಮಾಜ ಸೇವೆ ಕ್ಷೇತ್ರದಲ್ಲಿ ಅನ್ನಪೂರ್ಣ, ಕನ್ನಡಪರ ಹೋರಾಟಗಾರರಾದ ಸುರೇಶ್ ಸೇರಿದಂತೆ ಒಟ್ಟು 14 ಮಂದಿ ಗಣ್ಯರಿಗೆ ಸನ್ಮಾನಿಸಲಾಯಿತು.

ಈ ವೇಳೆ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆನಂದ್, ಉಪಾಧ್ಯಕ್ಷ ಮಲ್ಲೇಶ್, ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾ.ಪಂ ಇಒ ಮುನಿರಾಜು, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕನ್ನಡಪರ ಹೋರಾಟಗಾರರು, ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

10 minutes ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

9 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago