Categories: Home

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಆಗ್ರಹಿಸಿ ಅ.19 ಬೃಹತ್ ಪ್ರತಿಭಟನೆ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ಸರ್ಕಾರ ಯಾವುದೇ ರೀತಿಯ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಉದ್ಯೋಗ ಮೀಸಲಾತಿಗಾಗಿ ಆಗ್ರಹಿಸಿ, ಅ.19 ರಂದು ಬೆಂಗಳೂರಿನಲ್ಲಿ ಬೆಂಗಳೂರು ಮೆಜೆಸ್ಟಿಕ್ ಸಂಗೊಳ್ಳಿ ರಾಯಣ್ಣ ಪ್ರತಿಮೆಯ ಮುಂಭಾಗದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ಮೂಲಕ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದು ಕನ್ನಡ ಜಾಗೃತಿ  ವೇದಿಕೆ ಜಿಲ್ಲಾಧ್ಯಕ್ಷ ಎಂ.ನಾಗರಾಜ್ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕನ್ನಡ ಜಾಗೃತ ವೇದಿಕೆ ವತಿಯಿಂದ ನಡೆದ ಸಭೆಯಲ್ಲಿ  ಪ್ರತಭಟನಾ ರ್ಯಾಲಿಯ ಕರಪತ್ರಗಳನ್ನು ಬಿಡುಗಡೆ ಮಾಡಿ ಸುದ್ಧಿಗಾರರೊಂದಿಗೆ ಮಾತನಾಡಿದರು.

ಭಾಷಾವಾರು ಪ್ರಾಂತ್ಯಗಳು ರಚನೆಯಾಗಿ 68 ವರ್ಷಗಳು ಕಳೆದಿದ್ದರೂ ಇನ್ನು ಅದರ ಆಶಯಗಳು ಈಡೇರಿಲ್ಲ. ಇಲ್ಲಿನ ರಾಜಕೀಯ ಪಕ್ಷಗಳಿಗೆ ಕನ್ನಡಿಗರು ಹಾಗೂ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ. ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಲ್ಲಿ ರಾಜ್ಯದಲ್ಲಿ ಆಡಳಿತ ನಡೆಸಿರುವ ಎಲ್ಲಾ ಸರ್ಕಾರಗಳು ವಿಫಲವಾಗಿವೆ. ಯಾವುದೇ ಖಾಸಗಿ ವಲಯದ ಉದ್ಯಮಗಳು ಪ್ರಾರಂಭಿಸಲು ನೀರು, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸಿಕೊಡುತ್ತದೆ. ಈ ನಾಡಿನ ರೈತರು ತಮ್ಮ ಭೂಮಿ ನೀಡಿರುತ್ತಾರೆ. ಆದರೆ, ಸ್ಥಳೀಯರಿಗೆ ಉದ್ಯೋಗ ಮಾತ್ರ ದೊರೆಯುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಳ ಹಂತದ ಉದ್ಯೋಗಗಳಿಗೆ ಮಾತ್ರ ಕನ್ನಡಿಗರನ್ನು ಸೀಮಿತಗೊಳಿಸಲಾಗುತ್ತಿದೆ. ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ, ದೂರವಾಣಿ ಇಲಾಖೆ, ಅಂಚೆ ಇಲಾಖೆ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಹ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ. ಕನ್ನಡಿಗರನ್ನು ವಂಚಿಸಿ ಪರ ರಾಜ್ಯದವರಿಗೆ ಉದ್ಯೋಗ ನೀಡುವ ಯಾವುದೇ ಕಂಪನಿ ಕಾರ್ಖಾನೆ ಆದರೂ ಸರಿ, ಅವರಿಗೆ ಸರ್ಕಾರ ನೀಡಿರುವ ಸೌಲಭ್ಯಗಳನ್ನು ಹಾಗೂ ಪರವಾನಗಿಯನ್ನು ರದ್ದು ಮಾಡುವ ನಿರ್ಧಾರ ಸರ್ಕಾರ ಕೈಗೊಳ್ಳಬೇಕಿದೆ.  ಈ ನಿಟ್ಟಿನಲ್ಲಿ ನಮ್ಮ ಹಕ್ಕು ನಮ್ಮ ಉದ್ಯೋಗ ನಮ್ಮ ಅಸ್ತಿತ್ವ- ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎನ್ನುವ ಧ್ಯೇಯದೊಂದಿಗೆ  ಕನ್ನಡ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ  ಮಂಜುನಾಥ್ ದೇವಣ್ಣ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು,  ಪ್ರತಿಭಟನೆಗೆ ಎಲ್ಲಾ ಕನ್ನಡಪರ ಸಂಘಟನೆಗಳು, ಕನ್ನಡಪರ ಹೋರಾಟಗಾರರು, ಕನ್ನಡಪರ ಚಿಂತಕರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ವೇಳೆ ಕನ್ನಡ ಜಾಗೃತಿ ವೇದಿಕೆ ಹಿರಿಯ ಮುಖಂಡ ಎಚ್.ಎಸ್.ಅಗ್ನಿ ವೆಂಕಟೇಶ್, ತಾಲೂಕು ಅಧ್ಯಕ್ಷ ಶಶಿಧರ್.ಸಿ, ಕಾರ್ಮಿಕ ಘಟಕದ ಅಧ್ಯಕ್ಷ ಗುರುಪ್ರಸಾದ್. ಕೆ.ಆರ್, ಸಂಘಟನಾ ಕಾರ್ಯದರ್ಶಿಗಳಾದ ಕೃಷ್ಣ, ಶಿವಕುಮಾರ್, ತಾಲೂಕು ಮಹಿಳಾ ಉಪಾಧ್ಯಕ್ಷೆ ಮುನಿರತ್ನ ,  ಮುಖಂಡರಾದ ಗೌರಮ್ಮ, ಸದಸ್ಯರಾದ ಮೋಹನ್, ಲಿಂಗೇಶ್.ಪಿ, ಅಜಿತ್ ಕುಮಾರ್, ಹೇಮಂತ್ ಹಾಜರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

9 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

18 hours ago