Categories: ಸಿನಿಮಾ

ಕನ್ನಡಿಗರಿಗೆ ಪ್ರಭಾಸ್ ನಟನೆಯ ‘ಆದಿಪುರುಷ್’ ಭಾರೀ ನಿರಾಸೆ.. ಹಿಂದಿ ಹಾಗೂ ತೆಲುಗು ಪ್ರದರ್ಶನಕ್ಕೆ ಮಣೆ.. ಕನ್ನಡ ಪ್ರೇಕ್ಷಕರ ಕೋಪಕ್ಕೆ ಗುರಿಯಾಯ್ತಾ ಆದಿಪುರುಷ್..?

ಬಾಹುಬಲಿ ಖ್ಯಾತಿಯ ಪ್ರಭಾಸ್ ನಟನೆಯ ಬಹು ನಿರೀಕ್ಷಿತ ‘ಆದಿಪುರುಷ್’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭಗೊಂಡಿದೆ. ಕನ್ನಡಿಗರಿಗೆ ‘ಆದಿಪುರುಷ್’ ಭಾರೀ ನಿರಾಸೆ ನೀಡಿದ್ದು, ಕನ್ನಡದಲ್ಲಿ ಸಿನಿಮಾ ಶೋಗಳೇ ಇಲ್ಲ. ಕನ್ನಡ ಪ್ರೇಕ್ಷಕರ ಕೋಪಕ್ಕೆ ಸಿನಿಮಾ ಗುರಿಯಾಯ್ತಾ? ಹಿಂದಿ ಹಾಗೂ ತೆಲುಗು ಪ್ರದರ್ಶನಕ್ಕೆ ಮಣೆ ಹಾಕಿದ್ದು, ಬೆಂಗಳೂರಿನಲ್ಲೂ ತೆಲುಗು ಶೋಗಳಿಗೆ ಬೇಡಿಕೆಯಿದೆ.

‘ಆದಿಪುರುಷ್’ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಸಿನಿಮಾ ವೀಕ್ಷಣೆಗೆ ಈಗಾಗಲೇ ಟಿಕೆಟ್ ಅಡ್ವಾನ್ಸ್ ಬುಕಿಂಗ್ ಶುರುವಾಗಿದೆ. ಜೂನ್.16ಕ್ಕೆ ‘ಆದಿಪುರುಷ್’ ಬೆಳ್ಳಿ ತೆರೆಗೆ ಬರಲಿದ್ದು, ಈ ಸಿನಿಮಾದಲ್ಲಿ ನಟ ಪ್ರಭಾಸ್ ಶ್ರೀರಾಮನಾಗಿ ಕಾಣಿಸಿಕೊಳ್ತಿದ್ದಾರೆ. ‘ಆದಿಪುರುಷ್’ ಸಿನಿಮಾದ ಟಿಕೆಟ್ ಬಲು ದುಬಾರಿಯಾಗಿದ್ದು, ಆದರೂ ಟಿಕೆಟ್ ಬುಕ್ಕಿಂಗ್ ಭರದಿಂದ ಸಾಗುತ್ತಿದೆ. ಸಿನಿಮಾ ಟಿಕೆಟ್ 750 ರಿಂದ 1250ಕ್ಕೆ ಸಿಗ್ತಿದ್ದು, ಏಕಪರದೆಯಲ್ಲಿ ಟಿಕೆಟ್ ಗೆ 200ರೂ ಇದೆ.

ಇಂದು ಚಿತ್ರದ ಮುಂಗಡ ಬುಕಿಂಗ್ ತೆರೆಯಲ್ಪಟ್ಟಿದ್ದು, ಕರ್ನಾಟಕದಲ್ಲಿಯೂ ಸಹ ಬುಕಿಂಗ್ ಶುರುವಾಗಿದೆ. ಕಾರ್ತಿಕ್ ಗೌಡ ಒಡೆತನದ ಕೆಆರ್‌ಜಿ ಸ್ಟುಡಿಯೋಸ್ ಆದಿಪುರುಷ್ ಚಿತ್ರದ ಕರ್ನಾಟಕ ವಿತರಣಾ ಹಕ್ಕನ್ನು ಖರೀದಿಸಿದ್ದು, ರಾಜ್ಯಾದ್ಯಂತ ಚಿತ್ರವನ್ನು ವಿತರಿಸಲಿದೆ. ರಾಜ್ಯದ ಪ್ರಮುಖ ನಗರಗಳಾದ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ತುಮಕೂರು ಸೇರಿದಂತೆ ಹಲವು ನಗರಗಳಲ್ಲಿ ಮುಂಗಡ ಬುಕ್ಕಿಂಗ್ ತೆರೆಯಲಾಗಿದೆ.

ಚಿತ್ರಕ್ಕೆ ಓಂ ರಾವತ್ ಆಕ್ಷನ್ ಕಟ್ ಹೇಳಿದ್ದಾರೆ. ಹಾಗೆಯೇ ಮೊದಲು ಈ ಚಿತ್ರ ಭಾರೀ ಟೀಕೆಗೆ ಗುರಿಯಾಗಿತ್ತು. ಇದೀಗ ‘ಆದಿಪುರುಷ್’ ಬಿಡುಗಡೆಗಾಗಿ ಪ್ರೇಕ್ಷಕರು ಎದುರು ನೋಡುತ್ತಿದ್ದಾರೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

9 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

12 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

12 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

24 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago