ಬಾಹುಬಲಿ ಖ್ಯಾತಿಯ ಪ್ರಭಾಸ್ ನಟನೆಯ ಬಹು ನಿರೀಕ್ಷಿತ ‘ಆದಿಪುರುಷ್’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭಗೊಂಡಿದೆ. ಕನ್ನಡಿಗರಿಗೆ ‘ಆದಿಪುರುಷ್’ ಭಾರೀ ನಿರಾಸೆ ನೀಡಿದ್ದು, ಕನ್ನಡದಲ್ಲಿ ಸಿನಿಮಾ ಶೋಗಳೇ ಇಲ್ಲ. ಕನ್ನಡ ಪ್ರೇಕ್ಷಕರ ಕೋಪಕ್ಕೆ ಸಿನಿಮಾ ಗುರಿಯಾಯ್ತಾ? ಹಿಂದಿ ಹಾಗೂ ತೆಲುಗು ಪ್ರದರ್ಶನಕ್ಕೆ ಮಣೆ ಹಾಕಿದ್ದು, ಬೆಂಗಳೂರಿನಲ್ಲೂ ತೆಲುಗು ಶೋಗಳಿಗೆ ಬೇಡಿಕೆಯಿದೆ.
‘ಆದಿಪುರುಷ್’ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಸಿನಿಮಾ ವೀಕ್ಷಣೆಗೆ ಈಗಾಗಲೇ ಟಿಕೆಟ್ ಅಡ್ವಾನ್ಸ್ ಬುಕಿಂಗ್ ಶುರುವಾಗಿದೆ. ಜೂನ್.16ಕ್ಕೆ ‘ಆದಿಪುರುಷ್’ ಬೆಳ್ಳಿ ತೆರೆಗೆ ಬರಲಿದ್ದು, ಈ ಸಿನಿಮಾದಲ್ಲಿ ನಟ ಪ್ರಭಾಸ್ ಶ್ರೀರಾಮನಾಗಿ ಕಾಣಿಸಿಕೊಳ್ತಿದ್ದಾರೆ. ‘ಆದಿಪುರುಷ್’ ಸಿನಿಮಾದ ಟಿಕೆಟ್ ಬಲು ದುಬಾರಿಯಾಗಿದ್ದು, ಆದರೂ ಟಿಕೆಟ್ ಬುಕ್ಕಿಂಗ್ ಭರದಿಂದ ಸಾಗುತ್ತಿದೆ. ಸಿನಿಮಾ ಟಿಕೆಟ್ 750 ರಿಂದ 1250ಕ್ಕೆ ಸಿಗ್ತಿದ್ದು, ಏಕಪರದೆಯಲ್ಲಿ ಟಿಕೆಟ್ ಗೆ 200ರೂ ಇದೆ.
ಇಂದು ಚಿತ್ರದ ಮುಂಗಡ ಬುಕಿಂಗ್ ತೆರೆಯಲ್ಪಟ್ಟಿದ್ದು, ಕರ್ನಾಟಕದಲ್ಲಿಯೂ ಸಹ ಬುಕಿಂಗ್ ಶುರುವಾಗಿದೆ. ಕಾರ್ತಿಕ್ ಗೌಡ ಒಡೆತನದ ಕೆಆರ್ಜಿ ಸ್ಟುಡಿಯೋಸ್ ಆದಿಪುರುಷ್ ಚಿತ್ರದ ಕರ್ನಾಟಕ ವಿತರಣಾ ಹಕ್ಕನ್ನು ಖರೀದಿಸಿದ್ದು, ರಾಜ್ಯಾದ್ಯಂತ ಚಿತ್ರವನ್ನು ವಿತರಿಸಲಿದೆ. ರಾಜ್ಯದ ಪ್ರಮುಖ ನಗರಗಳಾದ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ತುಮಕೂರು ಸೇರಿದಂತೆ ಹಲವು ನಗರಗಳಲ್ಲಿ ಮುಂಗಡ ಬುಕ್ಕಿಂಗ್ ತೆರೆಯಲಾಗಿದೆ.
ಚಿತ್ರಕ್ಕೆ ಓಂ ರಾವತ್ ಆಕ್ಷನ್ ಕಟ್ ಹೇಳಿದ್ದಾರೆ. ಹಾಗೆಯೇ ಮೊದಲು ಈ ಚಿತ್ರ ಭಾರೀ ಟೀಕೆಗೆ ಗುರಿಯಾಗಿತ್ತು. ಇದೀಗ ‘ಆದಿಪುರುಷ್’ ಬಿಡುಗಡೆಗಾಗಿ ಪ್ರೇಕ್ಷಕರು ಎದುರು ನೋಡುತ್ತಿದ್ದಾರೆ.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…