ಬಾಹುಬಲಿ ಖ್ಯಾತಿಯ ಪ್ರಭಾಸ್ ನಟನೆಯ ಬಹು ನಿರೀಕ್ಷಿತ ‘ಆದಿಪುರುಷ್’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭಗೊಂಡಿದೆ. ಕನ್ನಡಿಗರಿಗೆ ‘ಆದಿಪುರುಷ್’ ಭಾರೀ ನಿರಾಸೆ ನೀಡಿದ್ದು, ಕನ್ನಡದಲ್ಲಿ ಸಿನಿಮಾ ಶೋಗಳೇ ಇಲ್ಲ. ಕನ್ನಡ ಪ್ರೇಕ್ಷಕರ ಕೋಪಕ್ಕೆ ಸಿನಿಮಾ ಗುರಿಯಾಯ್ತಾ? ಹಿಂದಿ ಹಾಗೂ ತೆಲುಗು ಪ್ರದರ್ಶನಕ್ಕೆ ಮಣೆ ಹಾಕಿದ್ದು, ಬೆಂಗಳೂರಿನಲ್ಲೂ ತೆಲುಗು ಶೋಗಳಿಗೆ ಬೇಡಿಕೆಯಿದೆ.
‘ಆದಿಪುರುಷ್’ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಸಿನಿಮಾ ವೀಕ್ಷಣೆಗೆ ಈಗಾಗಲೇ ಟಿಕೆಟ್ ಅಡ್ವಾನ್ಸ್ ಬುಕಿಂಗ್ ಶುರುವಾಗಿದೆ. ಜೂನ್.16ಕ್ಕೆ ‘ಆದಿಪುರುಷ್’ ಬೆಳ್ಳಿ ತೆರೆಗೆ ಬರಲಿದ್ದು, ಈ ಸಿನಿಮಾದಲ್ಲಿ ನಟ ಪ್ರಭಾಸ್ ಶ್ರೀರಾಮನಾಗಿ ಕಾಣಿಸಿಕೊಳ್ತಿದ್ದಾರೆ. ‘ಆದಿಪುರುಷ್’ ಸಿನಿಮಾದ ಟಿಕೆಟ್ ಬಲು ದುಬಾರಿಯಾಗಿದ್ದು, ಆದರೂ ಟಿಕೆಟ್ ಬುಕ್ಕಿಂಗ್ ಭರದಿಂದ ಸಾಗುತ್ತಿದೆ. ಸಿನಿಮಾ ಟಿಕೆಟ್ 750 ರಿಂದ 1250ಕ್ಕೆ ಸಿಗ್ತಿದ್ದು, ಏಕಪರದೆಯಲ್ಲಿ ಟಿಕೆಟ್ ಗೆ 200ರೂ ಇದೆ.
ಇಂದು ಚಿತ್ರದ ಮುಂಗಡ ಬುಕಿಂಗ್ ತೆರೆಯಲ್ಪಟ್ಟಿದ್ದು, ಕರ್ನಾಟಕದಲ್ಲಿಯೂ ಸಹ ಬುಕಿಂಗ್ ಶುರುವಾಗಿದೆ. ಕಾರ್ತಿಕ್ ಗೌಡ ಒಡೆತನದ ಕೆಆರ್ಜಿ ಸ್ಟುಡಿಯೋಸ್ ಆದಿಪುರುಷ್ ಚಿತ್ರದ ಕರ್ನಾಟಕ ವಿತರಣಾ ಹಕ್ಕನ್ನು ಖರೀದಿಸಿದ್ದು, ರಾಜ್ಯಾದ್ಯಂತ ಚಿತ್ರವನ್ನು ವಿತರಿಸಲಿದೆ. ರಾಜ್ಯದ ಪ್ರಮುಖ ನಗರಗಳಾದ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ತುಮಕೂರು ಸೇರಿದಂತೆ ಹಲವು ನಗರಗಳಲ್ಲಿ ಮುಂಗಡ ಬುಕ್ಕಿಂಗ್ ತೆರೆಯಲಾಗಿದೆ.
ಚಿತ್ರಕ್ಕೆ ಓಂ ರಾವತ್ ಆಕ್ಷನ್ ಕಟ್ ಹೇಳಿದ್ದಾರೆ. ಹಾಗೆಯೇ ಮೊದಲು ಈ ಚಿತ್ರ ಭಾರೀ ಟೀಕೆಗೆ ಗುರಿಯಾಗಿತ್ತು. ಇದೀಗ ‘ಆದಿಪುರುಷ್’ ಬಿಡುಗಡೆಗಾಗಿ ಪ್ರೇಕ್ಷಕರು ಎದುರು ನೋಡುತ್ತಿದ್ದಾರೆ.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…