ಕನ್ನಡಿಗರ ಕನ್ನಡ ಅಭಿಮಾನ ಭಾಷಣಗಳಿಗೆ ಮಾತ್ರ ಸೀಮಿತ ಆಗಬಾರದು-ಜಿ.ಎಸ್.ಸ್ಮಿತಾ

ಕನ್ನಡಿಗರ ಕನ್ನಡ ಅಭಿಮಾನ ಭಾಷಣಗಳಿಗೆ ಮಾತ್ರ ಸೀಮಿತ ಆಗಬಾರದು.‌ ಕನ್ನಡ ಭಾಷೆಯನ್ನು ಎಲ್ಲೆಡೆ ಬಳಸಿದಾಗ ಮಾತ್ರ ಕನ್ನಡವನ್ನು ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ  ಬಾಲಕಿಯರ ವಿದ್ಯಾರ್ಥಿನಿಲಯಲ್ಲಿ ನಡೆದ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಶ್ರೀಮಂತ ಪರಂಪರೆ ಇದೆ. ಕನ್ನಡ ಸಾಹಿತ್ಯದಲ್ಲಿ ಶ್ರೇಷ್ಠ ಕೃತಿಗಳು ಬಂದಿದೆ. ಎಂದಿಗೂ ಕನ್ನಡ ಸಾಹಿತ್ಯದ ಓದುಗರು ಕಡಿಮೆಯಾಗಬಾರದು. ಕನ್ನಡ ನಾಡು ಮೊದಲಿನಿಂದಲೂ ಸರ್ವಜನಾಂಗದ ತೋಟ ಎಂಬ ಕೀರ್ತಿಗೆ ಪಾತ್ರವಾಗಿದೆ. ಬೆಂಗಳೂರು ಇಂದು ದೇಶದ ರಾಜಧಾನಿಯಂತೆ ಕಾಣುತ್ತಿದೆ. ಬೆಂಗಳೂರಿನಲ್ಲಿರುವ ಕನ್ನಡಿಗರು ಕನ್ನಡ ಭಾಷೆಯಲ್ಲೇ ಮಾತನಾಡಿದರೆ ಇತರರು ಕನ್ನಡ ಕಲಿಯಲು ಸಾಧ್ಯವಾಗುತ್ತದೆ ಎಂದರು.

ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳು ಈಗ ಕನ್ನಡದಲಿ ನಡೆಯುತ್ತಿರುವುದು ಸ್ವಾಗತಾರ್ಹ ವಿಷಯವಾಗಿದೆ. ಕನ್ನಡದಲ್ಲಿ ವ್ಯಾಸಂಗ ಮಾಡಿದವರು ಸಹ ಸ್ಪರ್ಧಾತ್ಮಕ ಪರೀಕ್ಷಗಳಿಗೆ ಸೂಕ್ತ ಸಿದ್ದತೆ ನಡೆಸಿದರೆ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಮಾಹಿತಿಗಳು ಈಗ ಕನ್ನಡ ಜಾಲತಾಣಗಳಲ್ಲೂ ದೊರೆಯುತ್ತವೆ. ಇವುಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಕನ್ನಡಿಗರು ಸ್ಥಳೀಯ ಉದ್ಯೋಗಗಳನ್ನು ಪಡೆಯಲು ಕೌಶಲ್ಯ ಜ್ಞಾನವನ್ನು ಅರಿಯಬೇಕೆಂದರು.

ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ, ಕನ್ನಡ ಭಾಷೆ ಅತ್ಯಂತ ವೈಜ್ಞಾನಿಕವಾಗಿ ರೂಪಿಗೊಂಡ ಭಾಷೆಯಾಗಿದೆ. ಕನ್ನಡ ಲಿಪಿಯನ್ನು ಲಿಪಿಗಳ ರಾಣಿ ಎಂದು ಕರೆಯಲಾಗಿದೆ. ಕನ್ನಡ ಭಾಷೆಯ ಅನನ್ಯತೆಯನ್ನು ಕನ್ನಡ ಕವಿಗಳು ಹಾಡಿ ಹೊಗಳಿದ್ದಾರೆ. ಹಚ್ಚೇವು ಕನ್ನಡದ ದೀಪ ಗೀತೆಯನ್ನು ಕೇಳದ ಕನ್ನಡಿಗರೇ ಇಲ್ಲ. ಕನ್ನಡತ್ವವನ್ನು  ಡಿ.ಎಸ್.ಕರ್ಕಿಯವರು ತಮ್ಮ  ಕವಿತೆಯ ಮೂಲಕ ಕಟ್ಟಿಕೊಟ್ಟಿದ್ದಾರೆ.‌ ಕನ್ನಡ ನೆಲದಲ್ಲಿ ಕನ್ನಡತನ ಎಂದಿಗೂ ಮರೆಯಾಗಬಾರದು. ಕನ್ನಡತನವನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಬೇಕು ಎಂದರು.‌

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕನ್ನಡ ಭಾಷೆಯನ್ನು ಎಲ್ಲಾ ರಂಗದಲ್ಲೂ ಸಶಕ್ತ ಭಾಷೆಯಾಗಿ ಬಳಸಬೇಕಾಗಿದೆ. ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ, ತಾಂತ್ರಿಕ ಶಿಕ್ಷಣವನ್ನು ಕನ್ನಡ ಭಾಷಾ ಮಾಧ್ಯಮದಲ್ಲಿ ಕಲಿಯುವ ವಾತಾವರಣ ನಿರ್ಮಾಣ ಆಗಬೇಕಾಗಿದೆ. ಇದಕ್ಕಾಗಿ ಕನ್ನಡ ಪದಕೋಶವನ್ನು ಕನ್ನಡ ಭಾಷಾ ತಜ್ಞರು ಸಿದ್ದಗೊಳಿಸಬೇಕು. ಕರ್ನಾಟಕ ರಾಜ್ಯದ ನ್ಯಾಯಾಲಯಗಳಲ್ಲಿ ಕನ್ನಡ ಭಾಷೆಯಲ್ಲಿ ಎಲ್ಲಾ ವ್ಯವಹಾರಗಳು ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅನಿತಾದೇವಿ ನಾಯಕ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಮಮತಾ, ನಿಲಯದ ಪಾಲಕರುಗಳಾದ ಚಂದ್ರಶೇಖರ್, ವೆಂಕಟೇಶ್ ಮತ್ತು ವಿದ್ಯಾರ್ಥಿನಿಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

1 hour ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

5 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

8 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

2 days ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

2 days ago