ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಅಪರ್ಣಾ ನುಡಿನಮನ

ದೊಡ್ಡಬಳ್ಳಾಪುರ:ಸರಳ, ಸುಸ್ಪಷ್ಟ ಕನ್ನಡವನ್ನು ಬಳಸಿ ಕಾರ್ಯಕ್ರಮಗಳ ನಿರೂಪಣೆಯ ಮೂಲಕ ಗಮನ ಸೆಳೆದಿದ್ದ ನಿರೂಪಕಿ ಹಾಗೂ ನಟಿ ಅಪರ್ಣಾ ಅವರ ನಿಧನ ಹಿನ್ನಲೆ ಇಲ್ಲಿನ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಶುಕ್ರವಾರ ನುಡಿನಮನ ಹಾಗೂ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಿತು.

ಅಪರ್ಣಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು.

ಬಳಿಕ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಪ್ರೊ.ರವಿಕಿರಣ್‌ ಕೆ.ಆರ್, ಅಪರ್ಣಾ ಅವರು ಕನ್ನಡ ಕಿರುತೆರೆಯಲ್ಲಿ ಕಾರ್ಯಕ್ರಮ ನಿರೂಪಕಿಯಾಗಿ ಜನಪ್ರಿಯತೆ ಪಡೆದವರು. ದೂರದರ್ಶನದ ಮೂಲಕ ಆರಂಭವಾದ ಅವರ ನಿರೂಪಣಾ ಪಯಣ ಆಕಾಶವಾಣಿ, ಹಲವು ಖಾಸಗಿ ವಾಹಿನಿಗಳಲ್ಲೂ ಗಮನ ಸೆಳೆದಿತ್ತು. ಸರ್ಕಾರಿ ಕಾರ್ಯಕ್ರಮಗಳ ಅಚ್ಚುಕಟ್ಟಾದ ನಿರೂಪಣೆಗೂ ಅವರು ಹೆಸರಾಗಿದ್ದರು. ಬೆಂಗಳೂರು ಮೆಟ್ರೋ ಉದ್ಘೋಷಕಿಯಾಗಿಯೂ ಅವರ ದನಿ ಎಲ್ಲ ಕನ್ನಡಿಗರ ಮನೆ-ಮನವನ್ನು ಮುಟ್ಟಿತ್ತು ಎಂದು ಸ್ಮರಿಸಿದರು.
ಭಾಷೆಯ ಘನತೆಗೆ ಯಾವುದೇ ಲೋಪವಾಗದಂತೆ ಸಮರ್ಥವಾಗಿ ಭಾಷೆಯನ್ನು ಬಳಕೆ ಮಾಡುವ ಕೌಶಲ ಹೊಂದಿದ್ದ ಅವರು, ಸರಳ, ಸ್ಪಷ್ಟ ಹಾಗೂ ಅಪಭ್ರಂಶರಹಿತ ಹಿತಕಾರಿ ಕನ್ನಡವನ್ನು ಬಳಕೆ ಮಾಡುತ್ತಿದ್ದ ರೀತಿಯೇ ವಿಭಿನ್ನ. ಕನ್ನಡ ಸಿನಿಮಾ ಕ್ಷೇತ್ರದಲ್ಲೂ ತನ್ನದೇ ಆದ ವಿಶಿಷ್ಟ ಛಾಪನ್ನು ಅವರು ಮೂಡಿಸಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಮಾತನಾಡಿ, ಕನ್ನಡಿಗರು ಎಂದೂ ಮರೆಯದ ದನಿ ಅಪರ್ಣ ಅವರದ್ದು. ದೂರದರ್ಶನ ವಾಹಿನಿಯ ಹಲವು ಕಾರ್ಯಕ್ರಮಗಳನ್ನು ಅವರು ಪ್ರಸ್ತುತಪಡಿಸುತ್ತಿದ್ದ ರೀತಿ ಅತ್ಯಂತ ಮನನೀಯವಾಗಿತ್ತು ಎಂದರು.

ಕಾರ್ಯಕ್ರಮದಲ್ಲಿ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿಆರ್.ರಮೇಶ್, ಕಾರ್ಯದರ್ಶಿ ಅರವಿಂದ್, ಸಂಘಟನಾ ಕಾರ್ಯದರ್ಶಿ ನರೇಂದ್ರ, ಮುಖಂಡರಾದ ಉದಯ್, ವಿನಯ್ ಕುಮಾರ್, ಶಿವಾನಂದ್, ಶಕುಂತಲಾ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

7 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

8 hours ago

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

10 hours ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

11 hours ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪ ಕೇಸ್: ಅತ್ಯಾಚಾರ ಆರೋಪ ಸಾಬೀತು: ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು: ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…

14 hours ago

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು: ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣಗಳ ಕಳವು

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…

18 hours ago