ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಅಪರ್ಣಾ ನುಡಿನಮನ

ದೊಡ್ಡಬಳ್ಳಾಪುರ:ಸರಳ, ಸುಸ್ಪಷ್ಟ ಕನ್ನಡವನ್ನು ಬಳಸಿ ಕಾರ್ಯಕ್ರಮಗಳ ನಿರೂಪಣೆಯ ಮೂಲಕ ಗಮನ ಸೆಳೆದಿದ್ದ ನಿರೂಪಕಿ ಹಾಗೂ ನಟಿ ಅಪರ್ಣಾ ಅವರ ನಿಧನ ಹಿನ್ನಲೆ ಇಲ್ಲಿನ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಶುಕ್ರವಾರ ನುಡಿನಮನ ಹಾಗೂ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಿತು.

ಅಪರ್ಣಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು.

ಬಳಿಕ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಪ್ರೊ.ರವಿಕಿರಣ್‌ ಕೆ.ಆರ್, ಅಪರ್ಣಾ ಅವರು ಕನ್ನಡ ಕಿರುತೆರೆಯಲ್ಲಿ ಕಾರ್ಯಕ್ರಮ ನಿರೂಪಕಿಯಾಗಿ ಜನಪ್ರಿಯತೆ ಪಡೆದವರು. ದೂರದರ್ಶನದ ಮೂಲಕ ಆರಂಭವಾದ ಅವರ ನಿರೂಪಣಾ ಪಯಣ ಆಕಾಶವಾಣಿ, ಹಲವು ಖಾಸಗಿ ವಾಹಿನಿಗಳಲ್ಲೂ ಗಮನ ಸೆಳೆದಿತ್ತು. ಸರ್ಕಾರಿ ಕಾರ್ಯಕ್ರಮಗಳ ಅಚ್ಚುಕಟ್ಟಾದ ನಿರೂಪಣೆಗೂ ಅವರು ಹೆಸರಾಗಿದ್ದರು. ಬೆಂಗಳೂರು ಮೆಟ್ರೋ ಉದ್ಘೋಷಕಿಯಾಗಿಯೂ ಅವರ ದನಿ ಎಲ್ಲ ಕನ್ನಡಿಗರ ಮನೆ-ಮನವನ್ನು ಮುಟ್ಟಿತ್ತು ಎಂದು ಸ್ಮರಿಸಿದರು.
ಭಾಷೆಯ ಘನತೆಗೆ ಯಾವುದೇ ಲೋಪವಾಗದಂತೆ ಸಮರ್ಥವಾಗಿ ಭಾಷೆಯನ್ನು ಬಳಕೆ ಮಾಡುವ ಕೌಶಲ ಹೊಂದಿದ್ದ ಅವರು, ಸರಳ, ಸ್ಪಷ್ಟ ಹಾಗೂ ಅಪಭ್ರಂಶರಹಿತ ಹಿತಕಾರಿ ಕನ್ನಡವನ್ನು ಬಳಕೆ ಮಾಡುತ್ತಿದ್ದ ರೀತಿಯೇ ವಿಭಿನ್ನ. ಕನ್ನಡ ಸಿನಿಮಾ ಕ್ಷೇತ್ರದಲ್ಲೂ ತನ್ನದೇ ಆದ ವಿಶಿಷ್ಟ ಛಾಪನ್ನು ಅವರು ಮೂಡಿಸಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಮಾತನಾಡಿ, ಕನ್ನಡಿಗರು ಎಂದೂ ಮರೆಯದ ದನಿ ಅಪರ್ಣ ಅವರದ್ದು. ದೂರದರ್ಶನ ವಾಹಿನಿಯ ಹಲವು ಕಾರ್ಯಕ್ರಮಗಳನ್ನು ಅವರು ಪ್ರಸ್ತುತಪಡಿಸುತ್ತಿದ್ದ ರೀತಿ ಅತ್ಯಂತ ಮನನೀಯವಾಗಿತ್ತು ಎಂದರು.

ಕಾರ್ಯಕ್ರಮದಲ್ಲಿ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿಆರ್.ರಮೇಶ್, ಕಾರ್ಯದರ್ಶಿ ಅರವಿಂದ್, ಸಂಘಟನಾ ಕಾರ್ಯದರ್ಶಿ ನರೇಂದ್ರ, ಮುಖಂಡರಾದ ಉದಯ್, ವಿನಯ್ ಕುಮಾರ್, ಶಿವಾನಂದ್, ಶಕುಂತಲಾ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

13 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

14 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

20 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

21 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago