ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಅಪರ್ಣಾ ನುಡಿನಮನ

ದೊಡ್ಡಬಳ್ಳಾಪುರ:ಸರಳ, ಸುಸ್ಪಷ್ಟ ಕನ್ನಡವನ್ನು ಬಳಸಿ ಕಾರ್ಯಕ್ರಮಗಳ ನಿರೂಪಣೆಯ ಮೂಲಕ ಗಮನ ಸೆಳೆದಿದ್ದ ನಿರೂಪಕಿ ಹಾಗೂ ನಟಿ ಅಪರ್ಣಾ ಅವರ ನಿಧನ ಹಿನ್ನಲೆ ಇಲ್ಲಿನ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಶುಕ್ರವಾರ ನುಡಿನಮನ ಹಾಗೂ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಿತು.

ಅಪರ್ಣಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು.

ಬಳಿಕ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಪ್ರೊ.ರವಿಕಿರಣ್‌ ಕೆ.ಆರ್, ಅಪರ್ಣಾ ಅವರು ಕನ್ನಡ ಕಿರುತೆರೆಯಲ್ಲಿ ಕಾರ್ಯಕ್ರಮ ನಿರೂಪಕಿಯಾಗಿ ಜನಪ್ರಿಯತೆ ಪಡೆದವರು. ದೂರದರ್ಶನದ ಮೂಲಕ ಆರಂಭವಾದ ಅವರ ನಿರೂಪಣಾ ಪಯಣ ಆಕಾಶವಾಣಿ, ಹಲವು ಖಾಸಗಿ ವಾಹಿನಿಗಳಲ್ಲೂ ಗಮನ ಸೆಳೆದಿತ್ತು. ಸರ್ಕಾರಿ ಕಾರ್ಯಕ್ರಮಗಳ ಅಚ್ಚುಕಟ್ಟಾದ ನಿರೂಪಣೆಗೂ ಅವರು ಹೆಸರಾಗಿದ್ದರು. ಬೆಂಗಳೂರು ಮೆಟ್ರೋ ಉದ್ಘೋಷಕಿಯಾಗಿಯೂ ಅವರ ದನಿ ಎಲ್ಲ ಕನ್ನಡಿಗರ ಮನೆ-ಮನವನ್ನು ಮುಟ್ಟಿತ್ತು ಎಂದು ಸ್ಮರಿಸಿದರು.
ಭಾಷೆಯ ಘನತೆಗೆ ಯಾವುದೇ ಲೋಪವಾಗದಂತೆ ಸಮರ್ಥವಾಗಿ ಭಾಷೆಯನ್ನು ಬಳಕೆ ಮಾಡುವ ಕೌಶಲ ಹೊಂದಿದ್ದ ಅವರು, ಸರಳ, ಸ್ಪಷ್ಟ ಹಾಗೂ ಅಪಭ್ರಂಶರಹಿತ ಹಿತಕಾರಿ ಕನ್ನಡವನ್ನು ಬಳಕೆ ಮಾಡುತ್ತಿದ್ದ ರೀತಿಯೇ ವಿಭಿನ್ನ. ಕನ್ನಡ ಸಿನಿಮಾ ಕ್ಷೇತ್ರದಲ್ಲೂ ತನ್ನದೇ ಆದ ವಿಶಿಷ್ಟ ಛಾಪನ್ನು ಅವರು ಮೂಡಿಸಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಮಾತನಾಡಿ, ಕನ್ನಡಿಗರು ಎಂದೂ ಮರೆಯದ ದನಿ ಅಪರ್ಣ ಅವರದ್ದು. ದೂರದರ್ಶನ ವಾಹಿನಿಯ ಹಲವು ಕಾರ್ಯಕ್ರಮಗಳನ್ನು ಅವರು ಪ್ರಸ್ತುತಪಡಿಸುತ್ತಿದ್ದ ರೀತಿ ಅತ್ಯಂತ ಮನನೀಯವಾಗಿತ್ತು ಎಂದರು.

ಕಾರ್ಯಕ್ರಮದಲ್ಲಿ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿಆರ್.ರಮೇಶ್, ಕಾರ್ಯದರ್ಶಿ ಅರವಿಂದ್, ಸಂಘಟನಾ ಕಾರ್ಯದರ್ಶಿ ನರೇಂದ್ರ, ಮುಖಂಡರಾದ ಉದಯ್, ವಿನಯ್ ಕುಮಾರ್, ಶಿವಾನಂದ್, ಶಕುಂತಲಾ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

How To Choose The Best Real Money Casino Sites And Utilize Them

There are many benefits to playing at real money casino sites. Whether you are looking…

4 hours ago

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…

6 hours ago

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…

6 hours ago

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

7 hours ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

9 hours ago