ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಅಪರ್ಣಾ ನುಡಿನಮನ

ದೊಡ್ಡಬಳ್ಳಾಪುರ:ಸರಳ, ಸುಸ್ಪಷ್ಟ ಕನ್ನಡವನ್ನು ಬಳಸಿ ಕಾರ್ಯಕ್ರಮಗಳ ನಿರೂಪಣೆಯ ಮೂಲಕ ಗಮನ ಸೆಳೆದಿದ್ದ ನಿರೂಪಕಿ ಹಾಗೂ ನಟಿ ಅಪರ್ಣಾ ಅವರ ನಿಧನ ಹಿನ್ನಲೆ ಇಲ್ಲಿನ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಶುಕ್ರವಾರ ನುಡಿನಮನ ಹಾಗೂ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಿತು.

ಅಪರ್ಣಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು.

ಬಳಿಕ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಪ್ರೊ.ರವಿಕಿರಣ್‌ ಕೆ.ಆರ್, ಅಪರ್ಣಾ ಅವರು ಕನ್ನಡ ಕಿರುತೆರೆಯಲ್ಲಿ ಕಾರ್ಯಕ್ರಮ ನಿರೂಪಕಿಯಾಗಿ ಜನಪ್ರಿಯತೆ ಪಡೆದವರು. ದೂರದರ್ಶನದ ಮೂಲಕ ಆರಂಭವಾದ ಅವರ ನಿರೂಪಣಾ ಪಯಣ ಆಕಾಶವಾಣಿ, ಹಲವು ಖಾಸಗಿ ವಾಹಿನಿಗಳಲ್ಲೂ ಗಮನ ಸೆಳೆದಿತ್ತು. ಸರ್ಕಾರಿ ಕಾರ್ಯಕ್ರಮಗಳ ಅಚ್ಚುಕಟ್ಟಾದ ನಿರೂಪಣೆಗೂ ಅವರು ಹೆಸರಾಗಿದ್ದರು. ಬೆಂಗಳೂರು ಮೆಟ್ರೋ ಉದ್ಘೋಷಕಿಯಾಗಿಯೂ ಅವರ ದನಿ ಎಲ್ಲ ಕನ್ನಡಿಗರ ಮನೆ-ಮನವನ್ನು ಮುಟ್ಟಿತ್ತು ಎಂದು ಸ್ಮರಿಸಿದರು.
ಭಾಷೆಯ ಘನತೆಗೆ ಯಾವುದೇ ಲೋಪವಾಗದಂತೆ ಸಮರ್ಥವಾಗಿ ಭಾಷೆಯನ್ನು ಬಳಕೆ ಮಾಡುವ ಕೌಶಲ ಹೊಂದಿದ್ದ ಅವರು, ಸರಳ, ಸ್ಪಷ್ಟ ಹಾಗೂ ಅಪಭ್ರಂಶರಹಿತ ಹಿತಕಾರಿ ಕನ್ನಡವನ್ನು ಬಳಕೆ ಮಾಡುತ್ತಿದ್ದ ರೀತಿಯೇ ವಿಭಿನ್ನ. ಕನ್ನಡ ಸಿನಿಮಾ ಕ್ಷೇತ್ರದಲ್ಲೂ ತನ್ನದೇ ಆದ ವಿಶಿಷ್ಟ ಛಾಪನ್ನು ಅವರು ಮೂಡಿಸಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಮಾತನಾಡಿ, ಕನ್ನಡಿಗರು ಎಂದೂ ಮರೆಯದ ದನಿ ಅಪರ್ಣ ಅವರದ್ದು. ದೂರದರ್ಶನ ವಾಹಿನಿಯ ಹಲವು ಕಾರ್ಯಕ್ರಮಗಳನ್ನು ಅವರು ಪ್ರಸ್ತುತಪಡಿಸುತ್ತಿದ್ದ ರೀತಿ ಅತ್ಯಂತ ಮನನೀಯವಾಗಿತ್ತು ಎಂದರು.

ಕಾರ್ಯಕ್ರಮದಲ್ಲಿ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿಆರ್.ರಮೇಶ್, ಕಾರ್ಯದರ್ಶಿ ಅರವಿಂದ್, ಸಂಘಟನಾ ಕಾರ್ಯದರ್ಶಿ ನರೇಂದ್ರ, ಮುಖಂಡರಾದ ಉದಯ್, ವಿನಯ್ ಕುಮಾರ್, ಶಿವಾನಂದ್, ಶಕುಂತಲಾ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

41 minutes ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

2 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

7 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago