ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಅಪರ್ಣಾ ನುಡಿನಮನ

ದೊಡ್ಡಬಳ್ಳಾಪುರ:ಸರಳ, ಸುಸ್ಪಷ್ಟ ಕನ್ನಡವನ್ನು ಬಳಸಿ ಕಾರ್ಯಕ್ರಮಗಳ ನಿರೂಪಣೆಯ ಮೂಲಕ ಗಮನ ಸೆಳೆದಿದ್ದ ನಿರೂಪಕಿ ಹಾಗೂ ನಟಿ ಅಪರ್ಣಾ ಅವರ ನಿಧನ ಹಿನ್ನಲೆ ಇಲ್ಲಿನ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಶುಕ್ರವಾರ ನುಡಿನಮನ ಹಾಗೂ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಿತು.

ಅಪರ್ಣಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು.

ಬಳಿಕ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಪ್ರೊ.ರವಿಕಿರಣ್‌ ಕೆ.ಆರ್, ಅಪರ್ಣಾ ಅವರು ಕನ್ನಡ ಕಿರುತೆರೆಯಲ್ಲಿ ಕಾರ್ಯಕ್ರಮ ನಿರೂಪಕಿಯಾಗಿ ಜನಪ್ರಿಯತೆ ಪಡೆದವರು. ದೂರದರ್ಶನದ ಮೂಲಕ ಆರಂಭವಾದ ಅವರ ನಿರೂಪಣಾ ಪಯಣ ಆಕಾಶವಾಣಿ, ಹಲವು ಖಾಸಗಿ ವಾಹಿನಿಗಳಲ್ಲೂ ಗಮನ ಸೆಳೆದಿತ್ತು. ಸರ್ಕಾರಿ ಕಾರ್ಯಕ್ರಮಗಳ ಅಚ್ಚುಕಟ್ಟಾದ ನಿರೂಪಣೆಗೂ ಅವರು ಹೆಸರಾಗಿದ್ದರು. ಬೆಂಗಳೂರು ಮೆಟ್ರೋ ಉದ್ಘೋಷಕಿಯಾಗಿಯೂ ಅವರ ದನಿ ಎಲ್ಲ ಕನ್ನಡಿಗರ ಮನೆ-ಮನವನ್ನು ಮುಟ್ಟಿತ್ತು ಎಂದು ಸ್ಮರಿಸಿದರು.
ಭಾಷೆಯ ಘನತೆಗೆ ಯಾವುದೇ ಲೋಪವಾಗದಂತೆ ಸಮರ್ಥವಾಗಿ ಭಾಷೆಯನ್ನು ಬಳಕೆ ಮಾಡುವ ಕೌಶಲ ಹೊಂದಿದ್ದ ಅವರು, ಸರಳ, ಸ್ಪಷ್ಟ ಹಾಗೂ ಅಪಭ್ರಂಶರಹಿತ ಹಿತಕಾರಿ ಕನ್ನಡವನ್ನು ಬಳಕೆ ಮಾಡುತ್ತಿದ್ದ ರೀತಿಯೇ ವಿಭಿನ್ನ. ಕನ್ನಡ ಸಿನಿಮಾ ಕ್ಷೇತ್ರದಲ್ಲೂ ತನ್ನದೇ ಆದ ವಿಶಿಷ್ಟ ಛಾಪನ್ನು ಅವರು ಮೂಡಿಸಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಮಾತನಾಡಿ, ಕನ್ನಡಿಗರು ಎಂದೂ ಮರೆಯದ ದನಿ ಅಪರ್ಣ ಅವರದ್ದು. ದೂರದರ್ಶನ ವಾಹಿನಿಯ ಹಲವು ಕಾರ್ಯಕ್ರಮಗಳನ್ನು ಅವರು ಪ್ರಸ್ತುತಪಡಿಸುತ್ತಿದ್ದ ರೀತಿ ಅತ್ಯಂತ ಮನನೀಯವಾಗಿತ್ತು ಎಂದರು.

ಕಾರ್ಯಕ್ರಮದಲ್ಲಿ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿಆರ್.ರಮೇಶ್, ಕಾರ್ಯದರ್ಶಿ ಅರವಿಂದ್, ಸಂಘಟನಾ ಕಾರ್ಯದರ್ಶಿ ನರೇಂದ್ರ, ಮುಖಂಡರಾದ ಉದಯ್, ವಿನಯ್ ಕುಮಾರ್, ಶಿವಾನಂದ್, ಶಕುಂತಲಾ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

11 minutes ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

2 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

3 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

4 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

5 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

11 hours ago