ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಅಪರ್ಣಾ ನುಡಿನಮನ

ದೊಡ್ಡಬಳ್ಳಾಪುರ:ಸರಳ, ಸುಸ್ಪಷ್ಟ ಕನ್ನಡವನ್ನು ಬಳಸಿ ಕಾರ್ಯಕ್ರಮಗಳ ನಿರೂಪಣೆಯ ಮೂಲಕ ಗಮನ ಸೆಳೆದಿದ್ದ ನಿರೂಪಕಿ ಹಾಗೂ ನಟಿ ಅಪರ್ಣಾ ಅವರ ನಿಧನ ಹಿನ್ನಲೆ ಇಲ್ಲಿನ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಶುಕ್ರವಾರ ನುಡಿನಮನ ಹಾಗೂ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಿತು.

ಅಪರ್ಣಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು.

ಬಳಿಕ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಪ್ರೊ.ರವಿಕಿರಣ್‌ ಕೆ.ಆರ್, ಅಪರ್ಣಾ ಅವರು ಕನ್ನಡ ಕಿರುತೆರೆಯಲ್ಲಿ ಕಾರ್ಯಕ್ರಮ ನಿರೂಪಕಿಯಾಗಿ ಜನಪ್ರಿಯತೆ ಪಡೆದವರು. ದೂರದರ್ಶನದ ಮೂಲಕ ಆರಂಭವಾದ ಅವರ ನಿರೂಪಣಾ ಪಯಣ ಆಕಾಶವಾಣಿ, ಹಲವು ಖಾಸಗಿ ವಾಹಿನಿಗಳಲ್ಲೂ ಗಮನ ಸೆಳೆದಿತ್ತು. ಸರ್ಕಾರಿ ಕಾರ್ಯಕ್ರಮಗಳ ಅಚ್ಚುಕಟ್ಟಾದ ನಿರೂಪಣೆಗೂ ಅವರು ಹೆಸರಾಗಿದ್ದರು. ಬೆಂಗಳೂರು ಮೆಟ್ರೋ ಉದ್ಘೋಷಕಿಯಾಗಿಯೂ ಅವರ ದನಿ ಎಲ್ಲ ಕನ್ನಡಿಗರ ಮನೆ-ಮನವನ್ನು ಮುಟ್ಟಿತ್ತು ಎಂದು ಸ್ಮರಿಸಿದರು.
ಭಾಷೆಯ ಘನತೆಗೆ ಯಾವುದೇ ಲೋಪವಾಗದಂತೆ ಸಮರ್ಥವಾಗಿ ಭಾಷೆಯನ್ನು ಬಳಕೆ ಮಾಡುವ ಕೌಶಲ ಹೊಂದಿದ್ದ ಅವರು, ಸರಳ, ಸ್ಪಷ್ಟ ಹಾಗೂ ಅಪಭ್ರಂಶರಹಿತ ಹಿತಕಾರಿ ಕನ್ನಡವನ್ನು ಬಳಕೆ ಮಾಡುತ್ತಿದ್ದ ರೀತಿಯೇ ವಿಭಿನ್ನ. ಕನ್ನಡ ಸಿನಿಮಾ ಕ್ಷೇತ್ರದಲ್ಲೂ ತನ್ನದೇ ಆದ ವಿಶಿಷ್ಟ ಛಾಪನ್ನು ಅವರು ಮೂಡಿಸಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಮಾತನಾಡಿ, ಕನ್ನಡಿಗರು ಎಂದೂ ಮರೆಯದ ದನಿ ಅಪರ್ಣ ಅವರದ್ದು. ದೂರದರ್ಶನ ವಾಹಿನಿಯ ಹಲವು ಕಾರ್ಯಕ್ರಮಗಳನ್ನು ಅವರು ಪ್ರಸ್ತುತಪಡಿಸುತ್ತಿದ್ದ ರೀತಿ ಅತ್ಯಂತ ಮನನೀಯವಾಗಿತ್ತು ಎಂದರು.

ಕಾರ್ಯಕ್ರಮದಲ್ಲಿ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿಆರ್.ರಮೇಶ್, ಕಾರ್ಯದರ್ಶಿ ಅರವಿಂದ್, ಸಂಘಟನಾ ಕಾರ್ಯದರ್ಶಿ ನರೇಂದ್ರ, ಮುಖಂಡರಾದ ಉದಯ್, ವಿನಯ್ ಕುಮಾರ್, ಶಿವಾನಂದ್, ಶಕುಂತಲಾ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

6 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

11 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago