ಕನ್ನಡಿಗರ ಪರ ನ್ಯಾಯ ಸಮ್ಮತವಾದ ನಿರ್ಧಾರ ಕೈಗೊಳ್ಳಬೇಕು- ಇಲ್ಲದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

ರಾಜ್ಯದ ಖಾಸಗಿ ಕೈಗಾರಿಕೆಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ನೀಡುವ ಸಂಬಂಧ ವಿಧೇಯಕ ತಡೆ ಹಿಡಿದಿರುವ ರಾಜ್ಯ ಸರಕಾರದ ಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಖಂಡಿಸುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಹೇಳಿದ್ದಾರೆ.

ಈ ಕುರಿತು ಪಬ್ಲಿಕ್ ಮಿರ್ಚಿಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಕನ್ನಡಿಗರ ಪರ ನ್ಯಾಯ ಸಮ್ಮತವಾದ ನಿರ್ಧಾರ ಕೈಗೊಳ್ಳದೆ ಇದ್ದ ಪಕ್ಷದಲ್ಲಿ ಉಗ್ರ ಹೋರಾಟ ಕೈಗೊಳ್ಳುವ ಮೂಲಕ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಂಬಂಧ 15 ದಿನಗಳ ಒಳಗೆ ಸಚಿವ ಸಂಪುಟದ ಸಭೆ ನಡೆಸಿ, ಕನ್ನಡಿಗರ ಹಿತಕಾಯುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಪ್ರಕಟಿಸಲು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರು ಕನ್ನಡಿಗರ ಪರವಾಗಿ ಗಡುವು ನೀಡಿದ್ದಾರೆ.

ಉತ್ತಮ ನಿರ್ಧಾರ ಕೈಗೊಳ್ಳದೆ ಇದ್ದ ಪಕ್ಷದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲು ಕರ್ನಾಟಕ ರಕ್ಷಣಾ ವೇದಿಕೆ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.

ಕೆಲ ಕಾರ್ಪೋರೇಟ್ ಕಂಪನಿಗಳ ಒತ್ತಡಕ್ಕೆ ಮಣಿದು ಸರಕಾರವು ವಿಧೇಯಕವನ್ನು ತಡೆಹಿಡಿಯುವ ನಿರ್ಧಾರ ಮಾಡಿದೆ. ಇದನ್ನು ಈ ಕೂಡಲೇ ಹಿಂಪಡೆದು ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

2 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

2 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

4 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

13 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

14 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

16 hours ago