ರಾಜ್ಯದ ಖಾಸಗಿ ಕೈಗಾರಿಕೆಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ನೀಡುವ ಸಂಬಂಧ ವಿಧೇಯಕ ತಡೆ ಹಿಡಿದಿರುವ ರಾಜ್ಯ ಸರಕಾರದ ಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಖಂಡಿಸುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಹೇಳಿದ್ದಾರೆ.
ಈ ಕುರಿತು ಪಬ್ಲಿಕ್ ಮಿರ್ಚಿಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಕನ್ನಡಿಗರ ಪರ ನ್ಯಾಯ ಸಮ್ಮತವಾದ ನಿರ್ಧಾರ ಕೈಗೊಳ್ಳದೆ ಇದ್ದ ಪಕ್ಷದಲ್ಲಿ ಉಗ್ರ ಹೋರಾಟ ಕೈಗೊಳ್ಳುವ ಮೂಲಕ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂಬಂಧ 15 ದಿನಗಳ ಒಳಗೆ ಸಚಿವ ಸಂಪುಟದ ಸಭೆ ನಡೆಸಿ, ಕನ್ನಡಿಗರ ಹಿತಕಾಯುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಪ್ರಕಟಿಸಲು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರು ಕನ್ನಡಿಗರ ಪರವಾಗಿ ಗಡುವು ನೀಡಿದ್ದಾರೆ.
ಉತ್ತಮ ನಿರ್ಧಾರ ಕೈಗೊಳ್ಳದೆ ಇದ್ದ ಪಕ್ಷದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲು ಕರ್ನಾಟಕ ರಕ್ಷಣಾ ವೇದಿಕೆ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.
ಕೆಲ ಕಾರ್ಪೋರೇಟ್ ಕಂಪನಿಗಳ ಒತ್ತಡಕ್ಕೆ ಮಣಿದು ಸರಕಾರವು ವಿಧೇಯಕವನ್ನು ತಡೆಹಿಡಿಯುವ ನಿರ್ಧಾರ ಮಾಡಿದೆ. ಇದನ್ನು ಈ ಕೂಡಲೇ ಹಿಂಪಡೆದು ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…