ರಾಜ್ಯದ ಖಾಸಗಿ ಕೈಗಾರಿಕೆಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ನೀಡುವ ಸಂಬಂಧ ವಿಧೇಯಕ ತಡೆ ಹಿಡಿದಿರುವ ರಾಜ್ಯ ಸರಕಾರದ ಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಖಂಡಿಸುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಹೇಳಿದ್ದಾರೆ.
ಈ ಕುರಿತು ಪಬ್ಲಿಕ್ ಮಿರ್ಚಿಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಕನ್ನಡಿಗರ ಪರ ನ್ಯಾಯ ಸಮ್ಮತವಾದ ನಿರ್ಧಾರ ಕೈಗೊಳ್ಳದೆ ಇದ್ದ ಪಕ್ಷದಲ್ಲಿ ಉಗ್ರ ಹೋರಾಟ ಕೈಗೊಳ್ಳುವ ಮೂಲಕ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂಬಂಧ 15 ದಿನಗಳ ಒಳಗೆ ಸಚಿವ ಸಂಪುಟದ ಸಭೆ ನಡೆಸಿ, ಕನ್ನಡಿಗರ ಹಿತಕಾಯುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಪ್ರಕಟಿಸಲು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರು ಕನ್ನಡಿಗರ ಪರವಾಗಿ ಗಡುವು ನೀಡಿದ್ದಾರೆ.
ಉತ್ತಮ ನಿರ್ಧಾರ ಕೈಗೊಳ್ಳದೆ ಇದ್ದ ಪಕ್ಷದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲು ಕರ್ನಾಟಕ ರಕ್ಷಣಾ ವೇದಿಕೆ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.
ಕೆಲ ಕಾರ್ಪೋರೇಟ್ ಕಂಪನಿಗಳ ಒತ್ತಡಕ್ಕೆ ಮಣಿದು ಸರಕಾರವು ವಿಧೇಯಕವನ್ನು ತಡೆಹಿಡಿಯುವ ನಿರ್ಧಾರ ಮಾಡಿದೆ. ಇದನ್ನು ಈ ಕೂಡಲೇ ಹಿಂಪಡೆದು ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…