ಕನ್ನಡಿಗ ವಿಕಾಸ್ ಕುಮಾರ್ ಮೇಲೆ ವಿಂಗ್ ಕಮಾಂಡರ್ ಹಲ್ಲೆ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು…? ಮಾಹಿತಿ ಇಲ್ಲಿದೆ ಓದಿ

ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ ಎ‌ಂದರು.

ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ ಎಂದು ಹೇಳಿದ್ದಾರೆ.

ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ. ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ‌ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಎಂದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

10 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

10 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

12 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

12 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

19 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago