ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ ಎಂದರು.
ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ ಎಂದು ಹೇಳಿದ್ದಾರೆ.
ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ. ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಎಂದರು.
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…
ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…
ದೃಷ್ಟಿಕೋನ........ ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು, ಕನಸು ಕಾಣುತ್ತಲೇ ಇರುವ ಬಡ, ಮಧ್ಯಮ ವರ್ಗದವರು, ಅಧಿಕ ಪ್ರಸಂಗಿಗಳಂತೆ…
ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್ಗಳಲ್ಲಿ ವಿದ್ಯುತ್…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…