ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ ಎಂದರು.
ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ ಎಂದು ಹೇಳಿದ್ದಾರೆ.
ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ. ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…