ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ ಎಂದರು.
ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ ಎಂದು ಹೇಳಿದ್ದಾರೆ.
ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ. ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಎಂದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…