ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು ಸುವರ್ಣ ಸಂಭ್ರಮ ಆಚರಿಸುತ್ತಿರುವುದು ಕನ್ನಡಿಗರ ಹೆಮ್ಮೆಯ ಸಂಗತಿಯಾಗಿದೆ. ಕನ್ನಡಿಗರು ಪ್ರಾದೇಶಿಕ ಹಿನ್ನೆಲೆಯಲ್ಲಿ ಸ್ವಾಭಿಮಾನಗಳಾಗಬೇಕು ಎಂದು ಕನ್ನಡಪರ ಹಿರಿಯ ಹೋರಾಟಗಾರ ಸಂಜೀವನಾಯಕ ಹೇಳಿದರು.
ನಗರದ ಹಳೇ ಬಸ್ ನಿಲ್ದಾಣ ಬಳಿಯ ಡಾ.ರಾಜ್ ಕುಮಾರ್ ಕಲಾ ಮಂದಿರದಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕನ್ನಡ ಅಸ್ಮಿತೆಗೆ ಉಂಟಾಗುವ ಆತಂಕಗಳನ್ನು ಕನ್ನಡಿಗರು ಎಂದಿಗೂ ಸಹಿಸಿಕೊಳ್ಳಬಾರದು. ಕನ್ನಡ, ಕನ್ನಡಿಗರು ಮತ್ತು ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಎಲ್ಲಾ ಕನ್ನಡಿಗರು ಚಿಂತನೆ ನಡೆಸಬೇಕಾಗಿದೆ ಎಂದರು.
ಸೌಹಾರ್ದತೆಗೆ ಹೆಸರಾಗಿರುವ ಕರ್ನಾಟಕದಲ್ಲಿ ಎಂದಿಗೂ ಮತೀಯ ಶಕ್ತಿಗಳ ಬೆಳವಣಿಗೆ ಅವಕಾಶ ನೀಡಬಾರದು. ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳು ಬಗ್ಗೆ ಹರಿಸಲು ಜನಪ್ರತಿನಿಧಿಗಳು ಇಚ್ಛಾಶಕ್ತಿಯನ್ನು ತೋರಿಸುತ್ತಿಲ್ಲ. ಪ್ರಾದೇಶಿಕ ಪಕ್ಷಗಳ ಅಗತ್ಯವನ್ನು ಕರ್ನಾಟಕ ಜನರು ಬಯಸುತ್ತಾ ಬಂದಿದ್ದರೂ ಇನ್ನು ಈಡೇರಿಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು.
ನಂತರ ಹೊರರಾಜ್ಯಗಳಿಂದ ಬಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಾ ಕನ್ನಡ ಕಲಿತು ಸುಲಲಿತವಾಗಿ ಮಾತನಾಡುತ್ತಾ, ಓದುವುದನ್ನು ಕಲಿತವರಿಗೆ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸುವ ಮೂಲಕ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರಾಗಿರುವ ಬಿಹಾರ ರಾಜ್ಯದ ಮಣೀಶ್ ಶರ್ಮ ಮತ್ತು ಅನಿಲ್ ಗುಪ್ತ ಅವರನ್ನು ಕನ್ನಡಪರ ಸಂಘಟನೆಗಳ ಮುಖಂಡರು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಮಾಜಿ ಕೋಶಾಧ್ಯಕ್ಷ ನ.ಮಹಾದೇವ್, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಬಾ ಹೋಬಳಿ ಅಧ್ಯಕ್ಷ ದಾದಾಪೀರ್, ಗೌರವ ಕಾರ್ಯದರ್ಶಿ ಜಿ.ಸುರೇಶ್, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಪ್ರತಿನಿಧಿಗಳಾದ ಚಿಕ್ಜತುಮಕೂರು ಮುನಿರಾಜು, ನಾಗರತ್ನಮ್ಮ, ಗೆಜ್ಜಗದಹಳ್ಳಿ ಮುನಿರಾಜು, ಪತ್ರಕರ್ತರ ಸಂಘದ ಅಧ್ಯಕ್ಷ ಗಂಗರಾಜಶಿರವಾರ, ಕಾರ್ಮಿಕ ಸಂಘಟನೆಯ ಅಧ್ಯಕ್ಷ ಪಿ.ಎ.ವೆಂಕಟೇಶ್, ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡ ಪಕ್ಷದ ಅಧ್ಯಕ್ಷ ಡಿ.ವೆಂಕಟೇಶ್, ಕಾರ್ಯದರ್ಶಿ ಮುನಿಪಾಪಣ್ಣ, ಕನ್ನಡಪರ ಸಂಘಟನೆಯ ನಾಗರಾಜ್, ಸೂರ್ಯ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಪತ್ರಕರ್ತ ರಹೀಮ್, ಎಂಎಬಿಎಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…