ಕನ್ನಡ ಅಸ್ಮಿತೆಗೆ ಉಂಟಾಗುವ ಆತಂಕಗಳನ್ನು ಕನ್ನಡಿಗರು ಎಂದಿಗೂ ಸಹಿಸಿಕೊಳ್ಳಬಾರದು- ಕನ್ನಡಪರ ಹಿರಿಯ ಹೋರಾಟಗಾರ ಸಂಜೀವನಾಯಕ

ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು ಸುವರ್ಣ ಸಂಭ್ರಮ ಆಚರಿಸುತ್ತಿರುವುದು ಕನ್ನಡಿಗರ ಹೆಮ್ಮೆಯ ಸಂಗತಿಯಾಗಿದೆ. ಕನ್ನಡಿಗರು ಪ್ರಾದೇಶಿಕ ಹಿನ್ನೆಲೆಯಲ್ಲಿ  ಸ್ವಾಭಿಮಾನಗಳಾಗಬೇಕು ಎಂದು ಕನ್ನಡಪರ ಹಿರಿಯ ಹೋರಾಟಗಾರ ಸಂಜೀವನಾಯಕ ಹೇಳಿದರು.

ನಗರದ ಹಳೇ ಬಸ್ ನಿಲ್ದಾಣ ಬಳಿಯ ಡಾ.ರಾಜ್ ಕುಮಾರ್ ಕಲಾ ಮಂದಿರದಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕನ್ನಡ ಅಸ್ಮಿತೆಗೆ ಉಂಟಾಗುವ ಆತಂಕಗಳನ್ನು ಕನ್ನಡಿಗರು ಎಂದಿಗೂ ಸಹಿಸಿಕೊಳ್ಳಬಾರದು. ಕನ್ನಡ, ಕನ್ನಡಿಗರು ಮತ್ತು ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಎಲ್ಲಾ ಕನ್ನಡಿಗರು ಚಿಂತನೆ ನಡೆಸಬೇಕಾಗಿದೆ ಎಂದರು.

ಸೌಹಾರ್ದತೆಗೆ  ಹೆಸರಾಗಿರುವ ಕರ್ನಾಟಕದಲ್ಲಿ ಎಂದಿಗೂ ಮತೀಯ ಶಕ್ತಿಗಳ ಬೆಳವಣಿಗೆ ಅವಕಾಶ ನೀಡಬಾರದು.  ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳು ಬಗ್ಗೆ ಹರಿಸಲು ಜನಪ್ರತಿನಿಧಿಗಳು ಇಚ್ಛಾಶಕ್ತಿಯನ್ನು ತೋರಿಸುತ್ತಿಲ್ಲ. ಪ್ರಾದೇಶಿಕ ಪಕ್ಷಗಳ ಅಗತ್ಯವನ್ನು ಕರ್ನಾಟಕ ಜನರು ಬಯಸುತ್ತಾ ಬಂದಿದ್ದರೂ ಇನ್ನು ಈಡೇರಿಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು.

ನಂತರ ಹೊರರಾಜ್ಯಗಳಿಂದ ಬಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಾ ಕನ್ನಡ ಕಲಿತು ಸುಲಲಿತವಾಗಿ ಮಾತನಾಡುತ್ತಾ, ಓದುವುದನ್ನು ಕಲಿತವರಿಗೆ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸುವ ಮೂಲಕ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರಾಗಿರುವ  ಬಿಹಾರ ರಾಜ್ಯದ ಮಣೀಶ್ ಶರ್ಮ ಮತ್ತು  ಅನಿಲ್ ಗುಪ್ತ ಅವರನ್ನು ಕನ್ನಡಪರ ಸಂಘಟನೆಗಳ ಮುಖಂಡರು  ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಮಾಜಿ ಕೋಶಾಧ್ಯಕ್ಷ ನ.ಮಹಾದೇವ್, ದೊಡ್ಡಬಳ್ಳಾಪುರ   ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಬಾ ಹೋಬಳಿ ಅಧ್ಯಕ್ಷ ದಾದಾಪೀರ್, ಗೌರವ ಕಾರ್ಯದರ್ಶಿ ಜಿ.ಸುರೇಶ್, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಪ್ರತಿನಿಧಿಗಳಾದ ಚಿಕ್ಜತುಮಕೂರು ಮುನಿರಾಜು, ನಾಗರತ್ನಮ್ಮ, ಗೆಜ್ಜಗದಹಳ್ಳಿ ಮುನಿರಾಜು, ಪತ್ರಕರ್ತರ ಸಂಘದ ಅಧ್ಯಕ್ಷ ಗಂಗರಾಜಶಿರವಾರ, ಕಾರ್ಮಿಕ ಸಂಘಟನೆಯ ಅಧ್ಯಕ್ಷ ಪಿ.ಎ.ವೆಂಕಟೇಶ್, ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡ ಪಕ್ಷದ ಅಧ್ಯಕ್ಷ ಡಿ.ವೆಂಕಟೇಶ್, ಕಾರ್ಯದರ್ಶಿ ಮುನಿಪಾಪಣ್ಣ, ಕನ್ನಡಪರ ಸಂಘಟನೆಯ ನಾಗರಾಜ್, ಸೂರ್ಯ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಪತ್ರಕರ್ತ ರಹೀಮ್, ಎಂಎಬಿಎಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

11 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

11 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

11 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

11 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

14 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

18 hours ago