ಕನ್ನಡ ಉಪನ್ಯಾಸಕನಿಂದ ಯುವತಿಗೆ ಪ್ರೇಮ ಪಾಠ: ಮದುವೆ ಆಗಿದ್ದರೂ ಹಳೇ ವಿದ್ಯಾರ್ಥಿನಿ ಜೊತೆ ಚಕ್ಕಂದ: ಹೆಂಡತಿ‌‌ ಮಕ್ಕಳನ್ನ ಬಿಟ್ಟು ಯುವತಿ ಜೊತೆ ಜಂಪ್: ಸದ್ಯ ಪೊಲೀಸರ ಅತಿಥಿ

ಮುಂದೆ ಗುರಿ ಹಿಂದೆ ಗುರು ಇರಬೇಕು ಎಂಬ ಗಾದೆ ಮಾತಿದೆ. ಪೋಷಕರು ತಮ್ಮ ಮಕ್ಕಳನ್ನು ಶಿಕ್ಷಕರನ್ನ ನಂಬಿ ವಿದ್ಯಾಭ್ಯಾಸಕ್ಕಾಗಿ ಶಾಲಾ ಕಾಲೇಜಿಗೆ ಕಳಿಸುತ್ತಾರೆ. ಆದರೆ, ಇಲ್ಲೊಬ್ಬ ಕನ್ನಡ ಉಪನ್ಯಾಸಕ ತಾನು ಪಾಠ ಮಾಡಿದ ವಿದ್ಯಾರ್ಥಿನಿ ಜೊತೆ ಚಕ್ಕಂದ ಆಡಿದ್ದೂ ಅಲ್ಲದೆ, ಆಕೆಯನ್ನ ಕರೆದುಕೊಂಡು ಎಸ್ಕೇಪ್ ಆಗಿ, ಪೊಲೀಸರ ಕೈಗೆ ತಗಲಾಕ್ಕೊಂಡಿದ್ದಾನೆ. ಅಷ್ಟಕ್ಕೂ ಆ ಘಟನೆ ನಡೆದದ್ದು ಎಲ್ಲಿ, ಯಾರೂ ಆ ಉಪನ್ಯಾಸಕ ಎನ್ನುತ್ತೀರಾ ಈ ಸ್ಟೋರಿ ಓದಿ……

ಹೌದು, ಸಾರ್ವಜನಿಕ‌ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ವೇಳೆ, ತಲೆ ತಗ್ಗಿಸಿಕೊಂಡು ಹೋಗುತ್ತಿರುವ ಉಪನ್ಯಾಸಕ, ಈ ಫೋಟೋದಲ್ಲಿ ಕಾಣಿಸುತ್ತಿರುವ ಉಪನ್ಯಾಸಕನ ಹೆಸರು ಪ್ರವೀಣ್…. ಈತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪ್ರತಿಷ್ಟಿತ ಸರ್ಕಾರಿ ಅನುದಾನಿತ ಕಾಲೇಜಿನಲ್ಲಿ ಕಳೆದ 15 ವರ್ಷಗಳಿಂದ ಕನ್ನಡ ಪ್ರಾಧ್ಯಾಪಕನಾಗಿ ಕೆಲಸ ಮಾಡುತ್ತಿದ್ದ. ಜೊತೆಗೆ ಎನ್‌ಸಿಸಿ ಅಧಿಕಾರಿ (ಲೆಫ್ಟಿನೆಂಟ್) ಆಗಿದ್ದ.

ಈ ವೇಳೆ ಮಕ್ಕಳಿಗೆ ಶಿಸ್ತಿನ ಪಾಠ ಹೇಳುತ್ತಿದ್ದ ಈತನೇ ಶಿಸ್ತು ತಪ್ಪಿದ್ದಾನೆ. ತನಗೆ ಮದುವೆ ಆಗಿ ಎರಡು ಮಕ್ಕಳಿದ್ದರೂ ಹೆಂಡತಿಗೆ ಕಿರುಕುಳ ನೀಡಿ, ತನ್ನ ವಿದ್ಯಾರ್ಥಿನಿ ಜೊತೆಯಲ್ಲಿ ಚಕ್ಕಂದ ಆಡಿ ಎಸ್ಕೇಪ್ ಆಗಿದ್ದಾನೆ. ಪೋಲೀಸರು ಬಂಧಿಸುವ ವೇಳೆ ಇಬ್ಬರೂ ನಿದ್ದೆ ಮಾತ್ರೆ ನುಂಗಿ ಹೈಡ್ರಾಮ ಮಾಡಿದ್ದಾರೆ.

ಇನ್ನೂ ಯುವತಿಗೆ ಮದುವೆ ನಿಶ್ಚಯ ಆಗಿತ್ತಂತೆ. ಮದುವೆ ಹತ್ತಿರ ಆಗುತ್ತಿದ್ದಂತೆ ಯುವತಿ ಆಗಸ್ಟ್ 2 ರಂದು ಮನೆ ಬಿಟ್ಟು ಪರಾರಿಯಾಗಿದ್ದಾಳೆ ಎಂದು ಆರೋಪಿಸಿ ಯುವತಿ ಪೋಷಕರು ಭಯಪಟ್ಟು ಮಿಸ್ಸಿಂಗ್ ದೂರನ್ನು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು. ಆದರೆ, ದೂರು ದಾಖಲಿಸಿಕೊಂಡ ಪೊಲೀಸರು ಸೂಕ್ತ ತನಿಖೆ ನಡೆಸಿ, ತನಿಖೆಯಲ್ಲಿ ಈ ಉಪನ್ಯಾಸಕ ಕರೆದುಕೊಂಡು ಹೋಗಿರುವುದು ತಿಳಿದು ಬಂದಿದೆ. ಮೊದಲು ಯುವತಿಯನ್ನು ಕರೆದುಕೊಂಡು ದೆಹಲಿಗೆ ಹೋಗಿದ್ದಾನೆ‌. ನಂತರ ದೂರು ದಾಖಲಾದ ಮೇಲೆ ಬೆಂಗಳೂರಿನ ಎಸ್ಪಿ ಕಚೇರಿಗೆ ಬಂದು ಎಸ್ಪಿ ಮುಂದೆ ಯುವತಿ ಹೇಳಿಕೆ ನೀಡಿದ್ದಾಳೆ. ನಂತರ ಶಿಕ್ಷಕನೊಂದಿಗೆ ಎಸ್ಕೇಪ್ ಆಗಿ ಪೊಲೀಸರಿಗೆ ಚಳ್ಳೆ‌ಹಣ್ಣು ತಿನ್ನಿಸಿದ್ದಾರೆ. ಸ್ನೇಹಿತರ ಹೆಸರ ಮೇಲೆ ದಿನಕ್ಕೆ ಒಂದು ಸಿಮ್ ಬದಲಿಸಿಕೊಂಡು ಪೊಲೀಸರಿಗೆ ಮಾಹಿತಿ ಸಿಗದ ರೀತಿ ಮಾಡಿದ್ದಾನೆ. ಹಲವು ದಿನಗಳ ಕಾರ್ಯಾಚರಣೆ ನಂತರ ಆನೇಕಲ್ ನಲ್ಲಿ ಲಾಡ್ಜ್ ಒಂದರಲ್ಲಿ ಇದ್ದ ಮಾಹಿತಿ ತಿಳಿದ ಮಹಿಳಾ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ನೇತೃತ್ವದ ತಂಡ ಕೂಡಲೇ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಇನ್ನೂ ಶಿಕ್ಷಕನ ಹೆಂಡತಿಗೆ ಎರಡು ಮಕ್ಕಳಿದ್ದು, ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಿದ್ದನಂತೆ. ಅದೇ ರೀತಿ ಬೇರೆ ಯುವತಿಯರಿಗೂ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಎಂದು ಹೆಂಡತಿ ಆರೋಪ ಮಾಡಿದ್ದಾರೆ.

ಒಟ್ಟಾರೆ, ಪಾಠ ಹೇಳಿಕೊಟ್ಟ ಶಿಕ್ಷಕನೇ ಯುವತಿಯ ಜೊತೆಯಲ್ಲಿ ಚಕ್ಕಂದವಾಡಿ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದ್ದಾನೆ. ಇನ್ನೂ ಘಟನೆ ತಿಳಿಯುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ ಶಿಕ್ಷಕನನ್ನು ವಜಾ ಮಾಡಿದೆ. ಉಪನ್ಯಾಸಕನನ್ನು ಬಂಧಿಸಿದ ಪೊಲೀಸರು ಯಾವ ರೀತಿ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

10 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

11 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

12 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

17 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

17 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

18 hours ago